Connect with us

KARNATAKA

ಮಂಗಳೂರು ಬಂದರಿನಿಂದ ಹೊರಟ ತೈಲನೌಕೆ ಮೇಲೆ ಕ್ಷಿಪಣಿ ದಾಳಿ…!

ಮಂಗಳೂರು: ನವಮಂಗಳೂರು ಬಂದರಿನಿಂದ ನೆದರ್ಲೆಂಡ್‌ಗೆ ಬಂದರಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನ ವನ್ನು ಹೊತ್ತೊಯ್ಯುತ್ತಿದ್ದತೈಲ ಸಾಗಾಟ ಹಡಗಿನ ಮೇಲೆ ಯೆಮೆನ್‌ ಸಮೀಪ ಹೌತಿ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ.

ಅದೃಷ್ಟವಶಾತ್‌  ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ ಮತ್ತು ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಡಿ. 11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್‌ ಎಲ್‌-ಮಂಡೆಬ್‌ ಕೊಲ್ಲಿಯಲ್ಲಿ ಈ ಕ್ಷಿಪಣಿ ದಾಳಿ ನಡೆದಿದೆ. ಮಂಗಳೂರಿನಿಂದ ವಿವಿಧ ಕಂಪೆನಿಗಳ ಸರಕು ತುಂಬಿದ ಹಡಗುಗಳು ನಿತ್ಯ ಸಂಚರಿಸುತ್ತವೆ. ಈ ಪೈಕಿ ಬಹುತೇಕ ಹಡಗುಗಳು ತಲುಪಲಿರುವ ಕೊನೆಯ ನಿಲ್ದಾಣದ ಬಗ್ಗೆ ಇಲ್ಲಿ ಮಾಹಿತಿ ಇರುವುದಿಲ್ಲ. ಯಾಕೆಂದರೆ ಆ ಹಡಗುಗಳು ವಯಾ ದೇಶ-ವಿದೇಶದ ಇತರ ಬಂದರಿಗೆ ಹೋಗಿ ಅಲ್ಲಿಂದ ಸರಕು ತುಂಬಿಸಿಕೊಂಡು ಇತರ ಕಡೆಗೆ ಹೋಗುತ್ತವೆ. ಹೀಗಾಗಿ ಯೆಮೆನ್‌ ಸಮೀಪ ಗುರಿ ತಪ್ಪಿದ ಕ್ಷಿಪಣಿ ದಾಳಿಗೆ ಒಳಗಾದ ಹಡಗಿನ ವಿವರ ನಿರೀಕ್ಷಿಸಲಾಗುತ್ತಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ ಹೇಳಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *