Connect with us

LATEST NEWS

ನಾಪತ್ತೆಯಾಗಿದ್ದ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಮೃತದೇಹ ಪತ್ತೆ

ಪೂಂಜಾಲಕಟ್ಟೆ ಜುಲೈ 06 : ಅಡ್ಡೂರು-ಪೊಳಲಿ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಆಟೋ ಚಾಲಕ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ನಿನ್ನೆ ಸಂಜೆ ಪತ್ತೆಯಾಗಿದೆ.


ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಗಿರೀಶ್ ಬುಧವಾರ ಮಧ್ಯರಾತ್ರಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಡಿಗೆ ಇದೆ ಎಂದು ಮನೆಯವರಲ್ಲಿ ಹೇಳಿ ಹೊರಟವರು ಬಳಿಕ ನಾಪತ್ತೆಯಾಗಿದ್ದಾರೆ. ಈ ವೇಳೆ ರಾತ್ರಿ ಗಸ್ತಿನಲ್ಲಿದ್ದ ಬಜ್ಪೆ ಪೊಲೀಸರು ಅಡ್ಡೂರು-ಪೊಳಲಿ ಸೇತುವೆಯಲ್ಲಿ ಆಟೋ ಚಾಲನೆಯಲ್ಲಿ ಇರುವುದನ್ನ ಗಮನಿಸಿದ್ದಾರೆ. ಬಳಿಕ ಅ ಭಾಗದಲ್ಲಿ ಸ್ವಲ್ಪ ಹೊತ್ತುಗಳ ಕಾಲ ಹುಡುಕಿದರೂ ಚಾಲಕ ಪತ್ತೆಯಾಗಿರಲಿಲ್ಲ. ನಂತರ ರಿಕ್ಷಾದಲ್ಲಿ ದೊರೆತ ದಾಖಲೆ ಪತ್ರದ ಆಧಾರದಲ್ಲಿ ಅವರ ಮನೆಯವರಿಗೆ ಮಾಹಿತಿ ರವಾನಿಸಿದ್ದಾರೆ. ಇದಾದ ಬಳಿಕ ಗುರುವಾರ ನುರಿತ ಈಜುಗಾರರು ಆಗಮಿಸಿ ಫಲ್ಗುಣಿ ನದಿಯಲ್ಲಿ ಶೋಧ ಆರಂಭಿಸಿದ್ದರು. ಎಷ್ಟೇ ಹುಡುಕಾಟ ಮಾಡಿದ್ರೂ ಪತ್ತೆಯಾಗಿರಿಲಿಲ್ಲ. ಆದ್ರೆ ನಿನ್ನೆ ದಿನ ಶುಕ್ರವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ಸಂಜೆ ಆಗೋ ವೇಳೆಗೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಖಾಕಿ ಧರಿಸಿದ್ದ ವಸ್ತ್ರದಲ್ಲೇ ಮೃತದೇಹ ಪತ್ತೆಯಾಗಿದೆ.

ಎಣ್ಮೂರಿನ ಶ್ರೀ ನಾಗಬ್ರಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಮಾಡುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳು, ಪತ್ನಿಯನ್ನ ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *