Connect with us

    LATEST NEWS

    ಮನೆಯವರ ಮೇಲೆ ಮುನಿಸಿಕೊಂಡು ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆ..!!

    ಮಂಗಳೂರು ಅಕ್ಟೋಬರ್ 12: ಬೆಂಗಳೂರಿನಿಂದ ನಾಪತ್ತೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಈ ಮೂಲಕ ನಾಪತ್ತೆಯಾದ 7 ಮಕ್ಕಳು ಸುರಕ್ಷಿತವಾಗಿದ್ದು ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.


    21 ವರ್ಷದ ಯುವತಿ ಸೇರಿದಂತೆ ನಾಲ್ವರು ಇಂದು ಮಂಗಳೂರಿನ ಅತ್ತಾವರದಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಎಲ್ಲರೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿದ್ದಾರೆ. ಚಿಂತನ್, ಭೂಮಿ, ಅಮೃತವರ್ಷಿಣಿ ಹಾಗೂ ರಾಯನ್ ಇಂದು ಪತ್ತೆಯಾಗಿರುವ ಮಕ್ಕಳು. ಇವರು ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಒಂದೇ ಅಪಾರ್ಟ್ ಮೆಂಟ್ ನಿವಾಸಿಗಳು. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು.

    ಈ ನಾಲ್ವರು ರೈಲಿನ ಮೂಲಕ ಮಂಗಳೂರಿಗೆ ತಲುಪಿದ್ದಾರೆ. ರೈಲು ನಿಲ್ದಾಣ ಸುತ್ತಮುತ್ತ ತಿರುಗಾಟುತ್ತಿದ್ದ ವರನ್ನು ನೋಡಿ ಅನುಮಾಗೊಂಡ ಆಟೋ ಚಾಲಕ, ವಿಶ್ವಾಸಕ್ಕೆ ತಗೆದುಕೊಂಡಿದ್ದಾರೆ. ನಂತರ ಆಟೋದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಯುವತಿ ಹಾಗೂ ಮಕ್ಕಳು ಎಲ್ಲರೂ ಸುರಕ್ಷಿತವಾಗಿದ್ದು, ಡಿಸಿಪಿ ಹರಿರಾಮ ಶಂಕರ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply