Connect with us

    BELTHANGADI

    ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ದೀಕ್ಷಿತ್ ಪತ್ತೆ

    ಬೆಳ್ತಂಗಡಿ ಅಕ್ಟೋಬರ್ 11: ಸ್ನೇಹಿತರೊಂದಿಗೆ ಮೂಡಿಗೆರೆ ದೇವರ ಮನೆ ಪ್ರವಾಸಕ್ಕೆ ತೆರಳಿ ನಾಪತ್ತೆಯಾಗಿದ್ದ ಬೆಳ್ತಂಗಡಿಯ ಯುವಕ ಪತ್ತೆಯಾಗಿದ್ದು, ಇದೀಗ ಮನೆ ಸೇರಿದ್ದಾನೆ.


    ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ, ಇತ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದರು. ಬಳಿಕ ಹಿಂದಿರುಗಿ ಬರುವಾಗ ರಸ್ತೆ ಮದ್ಯೆ ಸ್ನೇಹಿತರಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದು, ದೀಕ್ಷಿತ್ ಮುನಿಸಿಕೊಂಡು ಕಾರು ಹತ್ತದೆ ಕಣ್ಣರೆಯಾಗಿದ್ದು, ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ.ಇದೀಗ ಯುವಕ ಬೇರೆ ವಾಹನದ ಮೂಲಕ ಊರಿಗೆ ಮರಳಿ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮನೆ ಮಂದಿ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply