Connect with us

    BELTHANGADI

    ಬೆಳ್ತಂಗಡಿ – ನಾಪತ್ತೆಯಾಗಿದ್ದ 2 ವರ್ಷದ ಮಗುವಿನ ಮೃತದೇಹ ನದಿಯಲ್ಲಿ ಪತ್ತೆ

    ಬೆಳ್ತಂಗಡಿ ಅಗಸ್ಟ್ 11: ನಿನ್ನೆ ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಸುಲಿಕೆರೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ 2 ವರ್ಷದ ಮಗುವಿನ ಮೃತ ದೇಹ ಇಂದು ಸಮೀಪದ ನದಿಯಲ್ಲಿ ಪತ್ತೆಯಾಗಿದೆ.


    ಜಂತಿ ಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ಸನಿಹದ ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ

    ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ ಇರುವುದನ್ನು ಕಂಡು ಹುಡುಕಾಟ ನಡೆಸಿದ್ದು ಮಗುವಿನ ಸುಳಿವು ಪತ್ತೆಯಾಗಿಲ್ಲ.ಮನೆಯಿಂದ 100 ಮೀಟರ್ ಅಂತರದಲ್ಲಿ ಹೊಳೆಯೊಂದು ಹರಿಯುತ್ತಿದ್ದು ಮಗು ನೀರುಪಾಲಾಗಿದೆ. ನಿನ್ನ ಸಂಜೆಯವರೆಗೆ ಮಗುವಿಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಮಗುವಿನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply