Connect with us

KARNATAKA

ಆಗುಂಬೆ – ನಾಪತ್ತೆಯಾಗಿದ್ದ ಯುವತಿಯ ಕೊಲೆ – ಮೃತದೇಹ ಪತ್ತೆ

ಶಿವಮೊಗ್ಗ ಜುಲೈ 07: ಕಳೆದ ಕೆಲವು ದಿನಗಳಿಂದ ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ.


ಎಸ್​ಕೆಡಿಆರ್​ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ.ನಾಲೂರು ಸಮೀಪದ ಮಣಿ ಎಂಬಾತ ಕತ್ತು ಹಿಸುಕಿ ಕೊಲೆ ಮಾಡಿ, ನಾಲೂರು ಸಮೀಪದ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಶನಿವಾರ ರಾತ್ರಿ ಆರೋಪಿ ಮಣಿಯನ್ನು ಘಟನಾ ಸ್ಥಳಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *