Connect with us

    LATEST NEWS

    ಪಳ್ಳಿಯಬ್ಬ ನಾಪತ್ತೆ ಪ್ರಕರಣಕ್ಕೆ ತಿರುವು ಇರಾದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಮಂಗಳೂರು:ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ  ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಪಲ್ಲಿಯಬ್ಬ ಯಾನೆ‌ ಪಲ್ಲಿಯಾಕ (70) ಶವವಾಗಿ ಪತ್ತೆಯಾಗಿದ್ದು, ಗಾಂಜಾ ವ್ಯಸನಿಗಳ‌ ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಇರಾ ಸಮೀಪದ ಗುಡ್ಡವೊಂದರಲ್ಲಿ‌ ಹೂತು ಹಾಕಿದ್ದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೃತ್ಯ ಎಸಗಲಾಗಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದೆ, ನಿಖರ ಮಾಹಿತಿ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಪಲ್ಲಿಯಬ್ಬ ಅವರು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು. ಗಾಂಜಾ ವ್ಯಸನಿಗಳ ತಂಡವು ಕಂಚಿನಡ್ಕ ಪ್ರದೇಶದಲ್ಲಿ ಇವರ ಕೊಲೆ ನಡೆಸಿ ಬಳಿಕ ಇರಾ ಪದವು ಬಳಿ ಹೂತಿದ್ದರು ಎನ್ನಲಾಗಿದೆ. ಶುಕ್ರವಾರ‌‌ ಮಧ್ಯಾಹ್ನದವರೆಗೂ ಇವರ ಮೊಬೈಲ್ ರಿಂಗಣಿಸಿ. ಬಳಿಕ‌ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಅವರ ಸಂಬಂಧಿಕರು ಇಬ್ಬರು ಶಂಕಿತರನ್ನು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.

    ಭಾನುವಾರ ಮುಂಜಾನೆ ಇರಾ ಪ್ರದೇಶದ ಪದವು ಬಳಿ ಶವ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂಟ್ವಾಳ ಹಾಗೂ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply