Connect with us

    LATEST NEWS

    ಕಾಂತಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಕಾಂಗ್ರೇಸ್ ಮುಖಂಡ ಮಿಥುನ್ ರೈ ಮನವಿ…!!

    ಮಂಗಳೂರು ಅಕ್ಟೋಬರ್ 03:ತುಳುನಾಡಿನ ದೈವಾರಾಧನೆಯ ಕಥಾಹಂದರ ಹೊಂದಿರುವ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರಕ್ಕೆ ಇದೀಗ ಎಲ್ಲೆಡೆ ಪ್ರಶಂಸೆಗಳ ಸುರಿಮಳೆ ಬರುತ್ತಿದ್ದು, ಚಿತ್ರ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ.
    ಇನ್ನು ಈ ಚಿತ್ರ ಇಡೀ ಕರ್ನಾಟಕದ ಜನ ನೋಡಬೇಕೆನ್ನುವ ಹಿನ್ನಲೆ ಯೂತ್ ಕಾಂಗ್ರೇಸ್ ಮುಖಂಡ ಮಿಥುನ್ ರೈ ರಾಜ್ಯ ಮುಖ್ಯಮಂತ್ರಿಗಳಲ್ಲಿ ತೆರಿಗೆ ಮುಕ್ತ ಗೊಳಿಸಲು ಮನವಿ ಮಾಡಿದ್ದಾರೆ.


    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಇಡೀ ಜಗತ್ತಿನಲ್ಲಿ “ದೈವಾರಾಧನೆ”ಗೆ ಇವತ್ತು ಒಂದು ಪ್ರಮುಖವಾದ ಪ್ರಾಶ್ಯಸ್ತತೆ ಇದೆ, ಅದು ಹುಟ್ಟಿಕೊಂಡಿದ್ದು ನಮ್ಮ ತುಳುನಾಡಿನ ಮಣ್ಣಿನಲ್ಲಿ … ದೈವಾರಾಧನೆಯ ವಿಶಿಷ್ಟತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜನರ ಮನಮುಟ್ಟಿಸುವ ಪ್ರಯತ್ನ ಇವತ್ತು “ಕಾಂತಾರ” ಚಿತ್ರದ ಮೂಲಕ ಫಲಿಸಿದೆ.

    ಸನ್ಮಾನ ಮುಖ್ಯಮಂತ್ರಿಗಳಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಾ ಇದ್ದೇನೆ, “ಕಾಂತಾರ” ಚಲನಚಿತ್ರ ಪ್ರತಿ ಮನೆಮನೆಗೆ ಮುಟ್ಟಬೇಕು,
    ಈ ಚಿತ್ರಕ್ಕೆ ತೆರಿಗೆ ಮುಕ್ತ ಮಾಡಬೇಕು. ತುಳುನಾಡಿನ ದೈವಾರಾಧನೆಯ ಮಹತ್ವ ಸಮಸ್ತ ಕರ್ನಾಟಕದಲ್ಲಿ ತಿಳಿಯಬೇಕೆಂದು ಸಮಸ್ತ ತುಳುವೆರ ಕೋರಿಕೆ. ಎಂದು ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply