Connect with us

LATEST NEWS

ಈ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ,ಇನ್ನು ಹಿಂದೂ ಸಮಾಜ ಸುಮ್ಮನಿರಲ್ಲ – ಶಾಸಕ ಭರತ್ ಶೆಟ್ಟಿ

ಮಂಗಳೂರು ಜೂನ್ 11: ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ತಿಳಿಯುತ್ತದೆ. ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.


ಬೋಳಿಯಾರ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ಭರತ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಇನ್ನು ಸರಿಪಡಿಸುತ್ತರೋ ಗೊತ್ತಿಲ್ಲ ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಈ ವಿಚಾರವನ್ನು ಗಮನಿಸಿದರೆ ಹಿಂದೂಗಳಿಗೆ ಕಾನೂನನ್ನು ನೀವೆ ಕೈಗೆತ್ತಿಕೊಳ್ಳಿ ಎಂಬ ಸೂಚನೆಯನ್ನು ಸರಕಾರವೇ ನೀಡಿದಂತೆ ಕಾಣುತ್ತಿದೆ ಎಂದರು.

ಇನ್ನು ಬಿಜೆಪಿ ಕಾಯಕರ್ತರ ಮೇಲೆ ನೀಡಲಾದ ಪ್ರತಿ ದೂರಿನ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ನವರ ಪ್ರೇರಣೆಯಿಂದ ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವ ವಿಚಾರ ನಮ್ಮ ಅರಿವಿಗೆ ಬಂದಿದೆ. ವಿಜಯೋತ್ಸವ ಮುಗಿದ ನಂತರ ಮೂರು ಮಂದಿ ಯುವಕರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹೊರತಾಗಿ ಪ್ರಚೋದನಾಕಾರಿ ಘೋಷಣೆ ಕೂಗಿಲ್ಲ. ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಪೊಲೀಸರು ಹೇಳುತ್ತಿದ್ದಾರೆ. ಭಾರತ್ ಮಾತಾ ಕೀ ಜೈ ಎನ್ನುವುದು ಪ್ರಚೋದನಕಾರಿ ಘೋಷಣೆ ಎಂದಾದರೆ ನಾವು ಪಾಕಿಸ್ತಾನದಲ್ಲಿ ಇದ್ದೇವಾ ಅಥವಾ ಭಾರತದಲ್ಲಿ ಇದ್ದೇವಾ ಎಂಬ ಪ್ರಶ್ನೆ ಮೂಡುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಎಂದವರ ಮೇಲೆ ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸುವವರು ಭಾರತ್ ಮಾತಕೀ ಜೈ ಎಂದವರಿಗೆ ಹಲ್ಲೆಯಾದಾಗ ಪ್ರೋತ್ಸಾಹ ನೀಡುವ ಸರ್ಕಾರದ ವಿರುದ್ಧ ಕಿಡಿಕಾರಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *