DAKSHINA KANNADA
ಪಡಿತರ ಸರ್ವರ್ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಆಗ್ರಹ
ಸುರತ್ಕಲ್: ಸರ್ವರ್ ಸಮಸ್ಯೆಯಿಂದ ಪಡಿತರ ಸಿಗುವಲ್ಲಿ ವಿಳಂಬವಾಗುತ್ತಿದ್ದು ಜನತೆ ಪರದಾಡುವಂತಾಗಿದೆ. ಆದ್ದರಿಂದ ಪಡಿತರ ಸರ್ವರ್ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಯನ್ನು ಶಾಸಕ ಡಾ. ಭರತ್ ಶೆಟ್ಟಿ ಆಗ್ರಹಿಸಿದ್ದಾರೆ.
ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಸೂಚಿಸಿದ್ದಾರೆ. ನಿತ್ಯ ಕೆಲಸ ಕಾರ್ಯ ಬಿಟ್ಟು ರೇಷನ್ ಅಂಗಡಿ ಮುಂದೆ ಜನ ನಿಲ್ಲುವಂತಾಗಿದೆ. ದೀಪಾವಳಿ ಹಬ್ಬವೂ ಇದ್ದು ಜನತೆಗೆ ಸಿಗುವ ಪಡಿತರ ವನ್ನು ಸೂಕ್ತ ಸಮಯದಲ್ಲಿ ಸಿಗುವಂತೆ ತಕ್ಷಣ ಕ್ರಮ ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಯವರನ್ನು ಆಗ್ರಹಿಸಿದ್ದಾರೆ.
You must be logged in to post a comment Login