Connect with us

LATEST NEWS

ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ ತಿರುಗೇಟು

ಮಂಗಳೂರು ಮಾರ್ಚ್ 27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದರು.


ಮಂಗಳೂರಿನಲ್ಲಿ ಮಾತನಾಡಿದ ಅವರು ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರಕಾರವನ್ನು ಸರಿದಾರಿಗೆ ತರಲಿ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದೂ ದಲಿತ, ಹಿಂದುಳಿದ ವರ್ಗದವರ ಕುರಿತ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ಧೋರಣೆಯನ್ನು ಸರಿಪಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಭಾಗ್ಯಗಳಿಗೆ ಹಣ ಹೊಂದಿಸಲು ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಕಳೆದ ವರ್ಷ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೊಟಿ ರೂ ಹಾಗೂ ಈ ವರ್ಷ 14 ಸಾವಿರ ಕೋಟಿ ರೂ.ಗಳನ್ನು ಬಿಟ್ಟಿ ಭಾಗ್ಯಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಆಮೂಲಕ ಹಿಂದುಳಿದ ವರ್ಗಗಳ ಬಗ್ಗೆ ತನಗೆಷ್ಟು ಕಾಳಜಿ ಇದೆ ಎಂಬುದನ್ನು ತಾನೇ ಬಹಿರಂಗಪಡಿಸಿದೆ ಎಂದು ಶಾಸಕ ಹರೀಶ್ ಪೂಂಜ ಟೀಕಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *