LATEST NEWS
ಕರಾವಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ತಾಳ್ಮೆ ಕೆದಕುವ ಕೆಲಸ ನಡೆಯುತ್ತಿದೆ – ಯು.ಟಿ ಖಾದರ್
ಕರಾವಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ತಾಳ್ಮೆ ಕೆದಕುವ ಕೆಲಸ ನಡೆಯುತ್ತಿದೆ – ಯು.ಟಿ ಖಾದರ್
ಮಂಗಳೂರು ಡಿಸೆಂಬರ್ 4: ಕರಾವಳಿಯಲ್ಲಿ ಕಾಂಗ್ರೇಸ್ ಮುಖಂಡರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದ್ದು, ದುಷ್ಕರ್ಮಿಗಳು ಕಾಂಗ್ರೆಸ್ ಕಾರ್ಯಕರ್ತರ ತಾಳ್ಮೆ ಕೆದಕುವ ಕೆಲಸ ಮಾಡುತ್ತಿದ್ದು ಹಲ್ಲೆ ಮಾಡಿದವರಿಗೆ ಮತ್ತೆ ಹಲ್ಲೆ ಮಾಡಬಹುದು ಮತ್ತೆ ಹಲ್ಲೆ ಮಾಡುವುದು ಕಷ್ಟದ ಕೆಲಸವಲ್ಲ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಮುಖಂಡರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದ್ದು, ಕಾಂಗ್ರೇಸ್ ಕಾರ್ಯಕರ್ತರು ಈ ವಿಚಾರದಲ್ಲಿ ಗರಂ ಆಗಿದ್ದು, ಸಮಾಧಾನ ಮಾಡಿದರೂ ನನ್ನ ಮೇಲೆಯೇ ಕಾರ್ಯಕರ್ತರು ರೇಗಾಡ್ತಾ ಇದ್ದಾರೆ ಎಂದು ಹೇಳಿದರು. ಸಮಾಜದ ಶಾಂತಿ ಸುವ್ಯವಸ್ಥೆ ಗೆ ಕಾರಣದಿಂದಾಗಿ ಕಾಂಗ್ರೇಸ್ ಕಾರ್ಯಕರ್ತರು ಸುಮ್ಮನಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಸುವ್ಯವಸ್ಥೆ ಹಾಳು ಮಾಡೋದಿಲ್ಲ ಎಂದು ತಿಳಿಸಿದರು.
ಮೇರಮಜಲು ಕೊಲೆ ಯತ್ನ ಆರೋಪಿಗಳನ್ನು ಪೊಲೀಸರು ಒಂದು ಗಂಟೆಯಲ್ಲಿ ಅರೆಸ್ಟ್ ಮಾಡಿದ್ದಾರೆ. ಆದರೆ ಪೊಲೀಸರು ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು, ಪ್ರಕರಣದ ಹಿಂದೆ ಯಾರು ಇದ್ದಾರೆ ಎಂದು ಬಾಯಿಬಿಡಿಸಬೇಕು. ಆದರೆ ಜಿಲ್ಲೆಯ ಪೊಲೀಸರು ಈ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿರುವ ಬಗ್ಗೆ ಮುಖ್ಯಮಂತ್ರಿ ಗಳ ಗಮನಕ್ಕೆ ತರುತ್ತೇನೆ ಚುನಾವಣೆ ಬಳಿಕ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
You must be logged in to post a comment Login