Connect with us

    LATEST NEWS

    ಮಕ್ಕಳಿಗೆ ಮೊಟ್ಟೆ – ಉಡುಪಿ ಶಾಸಕ ರಘುಪತಿ ಭಟ್ ಬೆಂಬಲ

    ಉಡುಪಿ ಡಿಸೆಂಬರ್ 10: ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಕ್ರಮಕ್ಕೆ ಇದೀಗ ಪರ ವಿರೋಧಗಳು ಪ್ರಾರಂಭವಾಗಿದ್ದು, ಉಡುಪಿ ಪೇಜಾವರ ಶ್ರೀಗಳು ಮೊಟ್ಟೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಉಡುಪಿ ಶಾಸಕ ಮೊಟ್ಟೆ ನೀಡುವುದನ್ನು ಬೆಂಬಲಿಸಿದ್ದಾರೆ.


    ಉಡುಪಿಯಲ್ಲಿ ಮಾತನಾಡಿದ ಅವರು ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಟ್ಟ ಕೂಡಲೇ ಮೊಟ್ಟೆಯನ್ನು ತಿನ್ನಲೇಬೇಕು ಎಂದೆನಿಲ್ಲ,ಕೊಟ್ಟರೆ ತಪ್ಪು ಎಂದು ನನಗೆ ಅನಿಸುವುದಿಲ್ಲ. ಸಣ್ಣ ಪ್ರಾಯದಲ್ಲಿ ಮಕ್ಕಳು ಸಸ್ಯಹಾರಿ ಇದ್ದರೆ ಸಸ್ಯಹಾರಿಯಾಗಿಯೇ ಇರುತ್ತಾರೆ. ಆದರೆ ಳೆದು ದೊಡ್ಡವರಾದ‌ ಮೇಲೆ‌ ಅವರು ಬದಲಾಗುವುದು ಉಂಟು . ಮೊಟ್ಟೆಯನ್ನು ಮಕ್ಕಳಿಗೆ ವಿತರಿಸುವ ಸಂದರ್ಭದಲ್ಲಿ ಪ್ರತ್ಯೇಕವಾಗಿ ಕೊಡುವ ವ್ಯವಸ್ಥೆ ಮಾಡಬಹುದು.ಕೆಲವೊಮ್ಮೆ ಸಸ್ಯಹಾರಿ ಮಕ್ಕಳಿಗೆ ಮೊಟ್ಟೆ ತಿನ್ನುವುದನ್ನು ನೋಡುವಾಗ ಬೇರೆ ತೆರನಾದ ಭಾವನೆಗಳು ಬರಬಹುದು. ಹೀಗಾಗಿ ಇದಕ್ಕೆ ಶಾಲೆಯಲ್ಲಿ ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಕ್ಕಳಿಗೆ ಮೊಟ್ಟೆ‌‌ ಕೊಡದೇ ಇರುವುದು ಸೂಕ್ತವಾದ‌ ನಿರ್ಧಾರವಲ್ಲ.ಇತರ ಮಕ್ಕಳು ಮೊಟ್ಟೆ ತಿನ್ನುವುದನ್ನು ನೋಡಿ ಮಕ್ಕಳು ಪ್ರಭಾವಿತರಾಗುವುದು ಇಲ್ಲ. ಹೀಗಾಗಿ ಮಕ್ಕಳಿಗೆ ಮೊಟ್ಟೆ‌ ನೀಡುವುದು ಸೂಕ್ತ ಎಂದು ಸರ್ಕಾರದ ನಿರ್ಧಾರದ ಬಗ್ಗೆ ಶಾಸಕರು ಬೆಂಬಲ ವ್ಯಕ್ತಪಡಿಸಿದರು. ಈಗಾಗಲೇ ಹಲವು ಸ್ವಾಮಿಜಿಗಳು ಮೊಟ್ಟೆ ವಿತರಣೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಉಡುಪಿ ಪೇಜಾವರ ಶ್ರೀಗಳು ಕೂಡ ಮೊಟ್ಟೆ ಬದಲು ಹಣ ನೀಡಲಿ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply