LATEST NEWS
ಅಯೋಧ್ಯೆ ರಾಮಲಲ್ಲಾನ ಬೆಳ್ಳಿ ಪಲ್ಲಕಿ ಉತ್ಸವದಲ್ಲಿ ಶಾಸಕ ವೇದವ್ಯಾಸ್ ಕಾಮತ್
ಮಂಗಳೂರು ಫೆರ್ಬವರಿ 11: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಬೆಳ್ಳಿ ಪಲ್ಲಕ್ಕಿಯನ್ನು ಸಮರ್ಪಿಸಲಾಗಿದ್ದು, ಬೆಳ್ಳಿ ಪಲ್ಲಕ್ಕಿ ಉತ್ಸವದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಹೆಗಲು ಕೊಟ್ಟು ರಾಮಲಲ್ಲಾ ಉತ್ಸವದಲ್ಲಿ ಭಾಗಿಯಾದರು.
ಅಯೋಧ್ಯೆಗೆ ಶ್ರೀ ಕಾಶೀ ಮಠ ಸಂಸ್ಥಾನದ ವತಿಯಿಂದ ಬೆಳ್ಳಿ ಪಲ್ಲಕ್ಕಿಯನ್ನು ಅರ್ಪಿಸಲಾಗಿತ್ತು. ಅಯೋಧ್ಯೆಗೆ ಭೇಟಿ ನೀಡಿದ್ದ ಶಾಸಕ ವೇದವ್ಯಾಸ್ ಕಾಮತ್ ರಾಮಲಲ್ಲಾನ ದರ್ಶನ ಪಡೆದರು. ಬಳಿಕ ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ ನೀಡಿದ್ದ ಬೆಳ್ಳಿಯ ಪಲ್ಲಕ್ಕಿ ಉತ್ಸವದಲ್ಲಿ ಭಾಗಿಯಾದರು. ಇದು ನನ್ನ ಜೀವನದ ಅತ್ಯಂತ ಪವಿತ್ರ ಕ್ಷಣವಾಗಿದ್ದು ಪರಮಪೂಜ್ಯ ಗುರುಗಳ ಹಾಗೂ ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಬೇರಾವುದೂ ಇಲ್ಲ ಎಂದು ತಿಳಿಸಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಜೊತೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಕೂಡ ಉತ್ಸವದಲ್ಲಿ ಪಾಲ್ಗೊಂಡರು.
You must be logged in to post a comment Login