Connect with us

    LATEST NEWS

    ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡ ಮಂಗಳೂರು ವಿಶ್ವವಿದ್ಯಾನಿಲಯ – ಶಾಸಕ ವೇದವ್ಯಾಸ್ ಕಾಮತ್

    ಮಂಗಳೂರು ಫೆಬ್ರವರಿ 09: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಹುದ್ದೆಗೆ 20 ರಿಂದ 30ಲಕ್ಷದವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು.


    ಕೊಚಿಮುಲ್ ಅಕ್ರಮ ನೇಮಕಾತಿಗೆ ಸಂಬಂಧಿಸಿ ಪರೀಕ್ಷೆ ಹಾಗೂ ಮೌಲ್ಯಮಾಪನವನ್ನು ನಡೆಸಿದ್ದ ಮಂಗಳೂರು ವಿಶ್ವವಿದ್ಯಾಲಯ ಈ ಅಕ್ರಮದಲ್ಲಿ ಭಾಗಿಯಾದ ಖಚಿತ ಮಾಹಿತಿ ಮೇರೆಗೆ ವಿವಿ ಯ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿಗೆ ಇ.ಡಿ ದಾಳಿ ನಡೆಸಿ, ನೇಮಕಾತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಕೆಲ ವರ್ಷಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಬಗ್ಗೆ ರಾಜ್ಯ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಅತ್ಯುತ್ತಮ ಅಭಿಪ್ರಾಯವಿದ್ದು ವಿದೇಶಗಳಿಂದಲೂ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದರು. ಆನಂತರದ ದಿನಗಳಲ್ಲಿ ಇಲ್ಲಿನ ಆಯಕಟ್ಟಿನ ಹುದ್ದೆಗೇರಿದ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ವಿಶ್ವವಿದ್ಯಾಲಯದ ಘನತೆಗೆ ಮಸಿ ಬಳಿದಿದ್ದಾರೆ. ಹೀಗಾಗಿ ವಿವಿ ತನ್ನ “ಎ ಗ್ರೇಡ್” ಮಾನ್ಯತೆಯಿಂದ “ಬಿ ಗ್ರೇಡ್” ಮಾನ್ಯತೆಗೆ ಇಳಿದಿದ್ದು ಇಂತಹ ಅಕ್ರಮಗಳಿಂದ ವಿವಿಯ ಘನತೆಗೆ ಇನ್ನಷ್ಟು ಕುತ್ತುಂಟಾಗುತ್ತಿದೆ. ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರೂ ಈ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯಾಗಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕೆಂದು ಶಾಸಕರು ಒತ್ತಾಯಿಸಿದರು.

    ಹಲವು ಸಮಯಗಳಿಂದ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡದ್ದು, ಫಲಿತಾಂಶ ಅದಲು ಬದಲಾಗಿದ್ದು, ವರ್ಷಗಟ್ಟಲೆ ಅಂಕಪಟ್ಟಿಯನ್ನು ವಿತರಿಸದೇ ಪ್ರತಿನಿತ್ಯ ವಿದ್ಯಾರ್ಥಿಗಳು ವಿ.ವಿ ಗೆ ಅಲೆಯುತ್ತಿರುವುದು, ವಿವಿಯ ತಾತ್ಕಾಲಿಕ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೇ ಇರುವುದು ಸೇರಿದಂತೆ ಹಲವಾರು ಪ್ರಕರಣಗಳು ನಡೆಯುತ್ತಿದ್ದರೂ ಎಚ್ಚೆತ್ತುಕೊಳ್ಳದ ವಿವಿ ವಿರುದ್ಧ ಸಹಜವಾಗಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಂತಹ ವಿದ್ಯಾರ್ಥಿ ಸಂಘಟನೆಗಳು ನ್ಯಾಯಕ್ಕಾಗಿ ಬೀದಿಗಿಳಿದಿವೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply