Connect with us

    LATEST NEWS

    ಮಂಗಳೂರಿನ ಆಟೋ ಚಾಲಕರ ಸಮಸ್ಯೆಗಳಿಗೆ ವಿಧಾನ ಸಭಾ ಅಧಿವೇಶನದಲ್ಲಿ ಧ್ವನಿಯಾದ ಶಾಸಕ ವೇದವ್ಯಾಸ್ ಕಾಮತ್

    ಮಂಗಳೂರು :  ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು.

    ನಗರದಲ್ಲಿ ದುಡಿಯುತ್ತಿರುವ ಸಾವಿರಾರು ರಿಕ್ಷಾ ಚಾಲಕರು ಮೀಟರ್ ಮುದ್ರೆಗಾಗಿ ಹೊರ ವಲಯದ ದೂರದ ಕುಲಶೇಖರಕ್ಕೆ ಹೋಗಬೇಕಾಗಿದೆ. ಅಲ್ಲೂ ಕೂಡಾ ಸರತಿ ಸಾಲಲ್ಲಿ ನಿಲ್ಲಬೇಕಾಗಿದ್ದು ಎಲ್ಲರಿಗೂ ಮೀಟರ್ ಮುದ್ರೆ ಸಿಗದೇ ಹಲವರು ವಾಪಾಸ್ ಮರಳಿ ಬರುವ ಪರಿಸ್ಥಿತಿಯಿದೆ. ಹೀಗಾಗಿ ನಗರದ ಕೇಂದ್ರ ಭಾಗದಲ್ಲಿರುವ ಮಂಗಳೂರಿನ ಆರ್ ಟಿ ಓ ಕಚೇರಿಯಲ್ಲೇ ವಾರಕ್ಕೆ ಎರಡು ಬಾರಿ ಮೀಟರ್ ಮುದ್ರೆ ನೀಡುವ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಾಸಕರು ಸರ್ಕಾರವನ್ನು ಆಗ್ರಹಿಸಿದರು.ಆಟೋ ಚಾಲಕರ ಈ ನ್ಯಾಯಯುತ ಬೇಡಿಕೆಗೆ ಸ್ಪಂದಿಸುವಂತೆ ಶಾಸಕರು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೂ ಸಹ ಮನವಿ ಸಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply