Connect with us

LATEST NEWS

ಸ್ಟೇಟ್ ಬ್ಯಾಂಕ್ ನ ಅವೈಜ್ಞಾನಿಕ ಬ್ಯಾರಿಕೇಡ್ ವಿರುದ್ದ ಬೃಹತ್ ಪ್ರತಿಭಟನೆ ಎಚ್ಚರಿಕೆ ನೀಡಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಸೆಪ್ಟೆಂಬರ್ 12: ನಗರದ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆವರೆಗೆ ಅವೈಜ್ಞಾನಿಕವಾಗಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇವಲ ಉಸ್ತುವಾರಿ ಸಚಿವರ ಮೌಖಿಕ ಆದೇಶವೆಂದು ಹೀಗೆ ಏಕಾಏಕಿ ಯಾರಿಗೂ ಮಾಹಿತಿ ನೀಡದೇ ದಿನ ಬೆಳಗಾಗುವುದರೊಳಗೆ ಅರ್ಥವಿಲ್ಲದ ನಿಯಮಗಳನ್ನು ಜನರ ಮೇಲೆ ಹೇರುವ ಮೊದಲು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕಿತ್ತು. ಕ್ಷೇತ್ರದ ಶಾಸಕನಾದ ನನಗಂತೂ ಈ ಬಗ್ಗೆ ಯಾವುದೇ ಮಾಹಿತಿಯೇ ನೀಡಿಲ್ಲ. ಹಾಗಾದರೆ ಇವರ ಮಟ್ಟಿಗೆ ಕ್ಷೇತ್ರದ ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯ ಲೆಕ್ಕಕ್ಕಿಲ್ಲವೇ?


ಈ ಅವ್ಯವಸ್ಥೆಯಿಂದ ತೊಂದರೆ ಅನುಭವಿಸುತ್ತಿರುವ ಸಾರ್ವಜನಿಕರು ಸೇರಿದಂತೆ ರಿಕ್ಷಾ ಚಾಲಕರಿಂದ ದಿನನಿತ್ಯ ಅನೇಕಾರು ಕರೆಗಳು ಬರುತ್ತಿದ್ದು ಅವರಿಗೆ ಯಾರು ಉತ್ತರ ಕೊಡುತ್ತಾರೆ? ಈ ಕೂಡಲೇ ಅವರೆಲ್ಲರ ಆಗ್ರಹದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಇಲ್ಲಿನ ಅವೈಜ್ಞಾನಿಕ ಬ್ಯಾರಿಕೇಡ್ ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಸಾರ್ವಜನಿಕರ ಪರವಾಗಿ ಸ್ಟೇಟ್ ಬ್ಯಾಂಕ್ ನಲ್ಲಿಯೇ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದೆಂದು ಶಾಸಕರು ಎಚ್ಚರಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *