Connect with us

    LATEST NEWS

    ಕೊರಗಜ್ಜನಿಗೆ ಹರಕೆ ಕೋಲ ಸೇವೆ ಸಲ್ಲಿಸಿದ ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ – ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿರುವಂತೆ ಸೂಚಿಸಿದ ದೈವ

    ಮಂಗಳೂರು ಜುಲೈ 28 : ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ವಿನಯ್​​ ಕುಲಕರ್ಣಿ ಕುಟುಂಬ ಸಮೇತ ಆಗಮಿಸಿ ತೊಕ್ಕೊಟ್ಟು ಜಂಕ್ಷನ್​ನ ಕೊರಗಜ್ಜನ ಕಟ್ಟೆಯಲ್ಲಿ ಶನಿವಾರ ರಾತ್ರಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆ ಸಲ್ಲಿಸಿದರು.


    ಈ ವೇಳೆ ದೈವದ ಎದುರು ತನಗಿರುವ ಸಂಕಷ್ಟದ ಬಗ್ಗೆ ಹೇಳಿಕೊಂಡ ಶಾಸಕ ವಿನಯ್ ಕುಲಕರ್ಣಿಗೆ 48 ದಿನಗಳೊಳಗೆ ಕ್ಷೇತ್ರ ನಿರ್ಬಂಧ ಸಮಸ್ಯೆ ಬಗೆಹರಿಸುವ ಬಗ್ಗೆ ದೈವ ಅಭಯ ನೀಡಿದೆ. ಈ ವೇಳೆ ಮಗನಿಗೆ ಅಪಘಾತ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗಿರುವ ಬಗ್ಗೆಯೂ ಹೇಳಿಕೊಂಡರು. ಸಂಕಷ್ಟ ನಿವಾರಿಸುವ ಬಗ್ಗೆ ಕೊರಗಜ್ಜ ದೈವ ಅಭಯ ನೀಡಿದ್ದು “ತಪ್ಪು ಮಾಡುವುದು ಸಹಜ. ಆದರೆ ಅದನ್ನು ತಿದ್ದಿಕೊಂಡು ಮುಂದುವರಿಯುವುದು ಉತ್ತಮ ಗುಣ” ಎಂದು ಹೇಳಿತು. ಇದೇ ವೇಳೆ, ಇನ್ನೂ ಮೂರು ವರ್ಷಗಳ ಕಾಲ ಬಹಳ ಸೂಕ್ಷ್ಮವಾಗಿರುವಂತೆಯೂ ಸೂಚನೆ ನೀಡಿತು. ಅಧರ್ಮದಲ್ಲಿ ಹೋದವರನ್ನು ನಾನು ನೋಡಿಕೊಳ್ಳುತ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಮುಂದೆ ಸಂತೋಷದಿಂದ ಕ್ಷೇತ್ರಕ್ಕೆ ಬಂದು ಕೋಲ ಸೇವೆ ನೀಡುವಂತೆ ದೈವ ನುಡಿಯಿತು.

    Share Information
    Advertisement
    Click to comment

    You must be logged in to post a comment Login

    Leave a Reply