Connect with us

LATEST NEWS

ಮಹಾಮಳೆಗೆ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್

ಮಹಾಮಳೆಗೆ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮೇ 31: ಮೇ 29 ರಂದು ಮಂಗಳೂರಿನಲ್ಲಿ ಸುರಿದ ಮಹಾ ಮಳೆಗೆ ಹಾನಿಗೀಡಾದ ಪ್ರದೇಶಗಳಿಗೆ ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಇಂದು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವೈದ್ಯನಾಥ ನಗರ ಅತ್ತಾವರ ಕಟ್ಟಪುಣಿ ಪರಿಸರದಲ್ಲಿ ಮೊನ್ನೆ ಸುರಿದ ಎರಡು ಮನೆಗಳು ಸಂಪೂರ್ಣವಾಗಿ ಹಾನಿಯಾಗಿದ್ದು ಮನೆ ಮಂದಿ ಹೊರಗಿದ್ದ ಸಂಧರ್ಭ ಅವಘಡ ಸಂಭವಿಸಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ್ ಕಾಮತ್ ಮನೆ ಮಂದಿಯನ್ನು ಸಂತೈಸಿದರು. ಸ್ಥಳೀಯ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ ಅವರ ನೇತೃತ್ವದಲ್ಲಿ ಮತ್ತು ಶಾಸಕರ ಸಹಭಾಗಿತ್ವದಲ್ಲಿ ನೊಂದ ಕುಟುಂಬಕ್ಕೆ ಅಕ್ಕಿ ವಿತರಿಸಲಾಯಿತು.

ಅಶೋಕನಗರ ದೈವಜ್ಞ ಸಭಾಂಗಣದ ಪಕ್ಕದಲ್ಲಿ ಹಲವಾರು ಕಡೆ ಆವರಣ ಗೋಡೆಗಳು ಕುಸಿದ ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *