Connect with us

    LATEST NEWS

    ಮಳೆ ಭಾದಿತ ಪ್ರದೇಶಗಳಿಗೆ ಜನಪ್ರತಿನಿಧಿಗಳ ಭೇಟಿ

    ಮಳೆ ಭಾದಿತ ಪ್ರದೇಶಗಳಿಗೆ ಜನಪ್ರತಿನಿಧಿಗಳ ಭೇಟಿ

    ಮಂಗಳೂರು ಮೇ 29: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಭಾದಿತ ಪ್ರದೇಶಗಳಿಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಸದ ನಳೀನ್ ಕುಮಾರ್ ಕಟೀಲ್ ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಜನರು ಯಾವುದೇ ಭಯ ಭೀತರಾಗುವ ಅಗತ್ಯವಿಲ್ಲ. ಯಾವುದೇ ಸಹಾಯಬೇಕಾಗಿದ್ದಲ್ಲಿ ಜಿಲ್ಲಾಢಳಿತ ಹಾಗೂ ನಮ್ಮನ್ನು ನೇರವಾಗಿ ಸಂಪರ್ಕಿಸಬಹದಾಗಿದೆ ಎಂದು ಹೇಳಿದರು.

    ಜಿಲ್ಲಾಡಳಿತ ಈಗಾಗಲೇ ಅಗತ್ಯ ಕ್ರಮ ಗಳನ್ನೂ ಕೈಗೊಂಡಿದೆ. ಸಂಭಾವ್ಯ ಅಪಾಯ ಎದುರಿಸಲು ಸನ್ನದ್ಧವಾಗಿದೆ .ಬಿಜೆಪಿ ಕಚೇರಿಯಲ್ಲೂ ಸಹಾಯವಾಣಿ ಆರಂಭಿಸಲಾಗಿದೆ .ಸಂಘನಿಕೇತನದಲ್ಲಿಯೂ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು .ವೈದ್ಯರ ತಂಡ ಹಾಗೂ ಆಂಬುಲೆನ್ಸ್ ಕೂಡ ಸೇವೆ ಗೆ ಸಿದ್ಧವಾಗಿದೆ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply