Connect with us

    KARNATAKA

    ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!

    ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

    ಶಾಸಕ  ಯಶ್ಪಾಲ್ ಸುವರ್ಣ ಈ ಬಗ್ಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಕೂಡ ಬರೆದಿದ್ದಾರೆ. ಜನವರಿ 22 ರ ದಿನ ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಿದೆ. ದೇಶದಾದ್ಯಂತ ಅಂದು ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ.ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಶ್ರೀರಾಮ ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು ಈ ಹಿನ್ನೆಲೆಯಲ್ಲಿ ಶಾಲಾಕಾಲೇಜು, ಸರಕಾರಿ ಸಂಸ್ಥೆ, ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ರಜೆ ನೀಡಬೇಕೆಂದು ಪತ್ರದ ಮೂಲಕ ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply