Connect with us

LATEST NEWS

ರೈತರ ಆತ್ಮಹತ್ಯೆಗೆ ಪ್ರೋತ್ಸಾಹ ಧನ ನೀಡುತ್ತಿರುವ ಕಾಂಗ್ರೇಸ್ ಸರಕಾರ – ನಟಿ ತಾರಾ

ರೈತರ ಆತ್ಮಹತ್ಯೆಗೆ ಪ್ರೋತ್ಸಾಹ ಧನ ನೀಡುತ್ತಿರುವ ಕಾಂಗ್ರೇಸ್ ಸರಕಾರ – ನಟಿ ತಾರಾ

ಮಂಗಳೂರು ಎಪ್ರಿಲ್ 11: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ರೈತ ಮೋರ್ಚಾದಿಂದ ಮುಷ್ಟಿ ಅಕ್ಕಿ ಅಭಿಯಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಹೊರವಲಯದ ಅಸೈಗೋಳಿಯ ಕೃಷಿಕ ರಾಮಕೃಷ್ಣ ಮತ್ತು ಕುರ್ನಾಡಿನ ಟಿ.ಜಿ.ರಾಜಾರಾಂ ಭಟ್ ಅವರ ಮನೆಯಲ್ಲಿ ಮುಷ್ಟಿ ಅಕ್ಕಿ ಅಭಿಯಾನಕ್ಕೆ ಇಂದು ವಿಧಾನ ಪರಿಷತ್ ಸದಸ್ಯೆ ನಟಿ ತಾರಾ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರ ಇಷ್ಟು ಸಾವಿರ ಕೋಟಿ ಅಷ್ಟು ಸಾವಿರ ಕೋಟಿ ಎಂದು ಕೇವಲ ಕೋಟಿಗಳ ಘೋಷಣೆ ಹಾಗೂ ಭಾಗ್ಯಗಳಿಗೆ ಮಾತ್ರ ಸೀಮಿತವಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಹಿತ ಕಾಪಾಡುವ ದೃಷ್ಟಿಯಿಂದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ತಾರಾ ವಾಗ್ದಾಳಿ ನಡೆಸಿದರು.

ಸಿನಿಮಾ ಕ್ಷೇತ್ರದಲ್ಲಿ ಉತ್ತಮ ನಟನೆ ಮಾಡಿದ್ದಕ್ಕೆ ನಗದು ಪುರಸ್ಕಾರ ನೀಡಿ ಮತ್ತಷ್ಟು ಉತ್ತಮ ಕೊಡುಗೆ ಕ್ಷೇತ್ರಕ್ಕೆ ನೀಡಲಿ ಎಂದು ಗೌರವಿಸುತ್ತಾರೆ. ಆದರೆ ಆತ್ಮಹತ್ಯೆ ಮಾಡಿದ ರೈತರಿಗೆ ಪರಿಹಾರ ಧನ ನೀಡಿ ಇನ್ನಷ್ಟು ರೈತರು ಸಾಯಲಿ ಅನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಪ್ರೋತ್ಸಾಹಿಸುತ್ತಿದೆ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ ಎಂದು ಅವರು ಕಿಡಿಕಾರಿದರು .

Share Information
Continue Reading
Advertisement
Click to comment

Leave a Reply

Your email address will not be published. Required fields are marked *