Connect with us

    LATEST NEWS

    ವಿಧಾನಪರಿಷತ್ ಚುನಾವಣಾ ಕಣಕ್ಕೆ ಎಂ.ಎನ್ ರಾಜೇಂದ್ರ ಕುಮಾರ್…!!

    ಮಂಗಳೂರು ನವೆಂಬರ್ 10: ಕರ್ನಾಟಕ ವಿಧಾನಪರಿಷತ್ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಇದೀಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು,ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಎರಡು ಸ್ಥಾನಗಳಿಗೆ ಸಹಕಾರ ಸಂಘದ ದಿಗ್ಗಜ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಅವರ ಅಭಿಮಾನಿ ಬಳಗದಿಂದ ಒತ್ತಡ ಬರುತ್ತಿದ್ದು, ಈ ಬೆಳವಣಿಗೆ ಜಿಲ್ಲೆಯಲ್ಲಿ ಬಾರೀ ಸಂಚಲನ ಮೂಡಿಸಿದೆ.


    ಈ ಕುರಿತಂತೆ ಉಡುಪಿಯಲ್ಲಿ ಮಾತನಾಡಿದ ಎಂ.ಎನ್ ರಾಜೇಂದ್ರ ಕುಮಾರ್ ನಾನು ಎಲ್ಲಾ ಪಕ್ಷದವರೊಂದಿಗೆ ಗುರುತಿಸಿಕೊಂಡಿದ್ದೇನೆ. ಆದರೆ, ನಾನು ಯಾವುದೇ ಪಕ್ಷಕ್ಕೆ ಸೇರಿಕೊಂಡಿಲ್ಲ. ನನ್ನದು ಸಹಕಾರ ಕ್ಷೇತ್ರ, ಯಾವುದೇ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಚುನಾವಣೆಗೆ ಸ್ಪರ್ಧಿಸುವುದಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದಿದ್ದಾರೆ.

    ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇಲ್ಲಿಯ ತನಕ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸಹಕಾರ ಸಂಘದ ಸದಸ್ಯರಿಂದ ಚುನಾವಣೆಗೆ ಸ್ಪರ್ಧಿಸಲು ಒತ್ತಡವಿದೆ. ಸಹಕಾರಿ ಕ್ಷೇತ್ರಕ್ಕೆ ಪರಿಷತ್ತಿನಲ್ಲಿ ಒಂದು ಸ್ಥಾನ ಮೀಸಲಿಡಬೇಕು ಎನ್ನುವ ಒತ್ತಯವಿದ್ದು, ಒಂದು ವಾರದೊಳಗೆ ಸ್ಪಷ್ಟ ನಿರ್ಧಾರ ಪ್ರಕಟಿಸಲಾಗುವುದೆಂದು ಅವರು ತಿಳಿಸಿದ್ದಾರೆ.

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಗ್ರಾ.ಪಂ. ಸದಸ್ಯರಲ್ಲಿ ಹೆಚ್ಚಿನವರು ಸಹಕಾರಿ ಕ್ಷೇತ್ರದ ಹಿನ್ನೆಲೆ ಇದ್ದವರು. ಗ್ರಾಮಪಂಚಾಯತ್ ನಲ್ಲಿರುವ ಮಹಿಳಾ ಸದಸ್ಯರಲ್ಲಿ ಕೂಡ ಬಹುತೇಕರು ನವೋದಯ ಸ್ವಸಹಾಯ ಸಂಘದಲ್ಲಿ ಗುರುತಿಸಿಕೊಂಡಿರುವವರು. ಹಾಗಾಗಿ ಅವರೆಲ್ಲರೂ ಡಾ. ರಾಜೇಂದ್ರ ಕುಮಾರ್‌ ವಿಧಾನ ಪರಿಷತ್‌ ಸ್ಥಾನಕ್ಕೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಬೇಕು ಎಂಬ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ರಾಜಕೀಯ ನಡೆ ಹೆಚ್ಚು ಕುತೂಹಲ ಮೂಡಿಸಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply