Connect with us

    LATEST NEWS

    ರಿವಾಲ್ವರ್ ತೋರಿಸಿ ಮೊಬೈಲ್ X ಮಾಲೀಕನ ಕಿಡ್ನಾಪ್ -ಲಕ್ಷಾಂತರ ಸುಲಿಗೆ

    ಕುಂದಾಪುರ: ಮೊಬೈಲ್ ಶೋರೂಂ ಮಾಲೀಕನನ್ನು ಕಿಡ್ನಾಪ್ ಮಾಡಿ ಲಕ್ಷಾಂತರ ರೂಪಾಯಿ ನಗದು ಹಾಗೂ ದಾಖಲೆಗಳನ್ನು ಸುಲಿಗೆ ಮಾಡಿರುವ ಪ್ರಕರಣ ನಡೆದಿದೆ. ಮೂಲತಃ ನಾವುಂದ ಅರೆಹೊಳೆಯವರಾದ ಮುಸ್ತಫಾ( 34 ) ಅಪಹರಣಕ್ಕೊಳಗಾದವರು.


    ಸದ್ಯ ಮುಸ್ತಾಫಾ ಅಪಹರಣಕಾರರಿಂದ ಬಿಡುಗಡೆಗೊಂಡಿದ್ದು, ನಗರದ ದತ್ತಾತ್ರೇಯ ವಸತಿ ಸಂಕೀರ್ಣದಲ್ಲಿ ಫ್ಲ್ಯಾಟ್ ಒಂದರಲ್ಲಿ ವಾಸವಿರುವ ತನ್ನನ್ನು ಮುಕ್ತಾರ್ ಹಾಗೂ ಇತರ ಐವರು ಅಪಹರಣ ಮಾಡಿ 4 ಲಕ್ಷದ 64 ಸಾವಿರದ ನೂರ ಎಪ್ಪತ್ತೈದು ರೂಪಾಯಿ ಹಣ ಹಾಗೂ 1 ಲಕ್ಷ ಮೌಲ್ಯದ ಸೊತ್ತುಗಳು ಮತ್ತು ಅಮೂಲ್ಯ ದಾಖಲಾತಿಗಳನ್ನು ಸುಲಿಗೆ ಮಾಡಿರುವ ಬಗ್ಗೆ ಇದೀಗ ಅಪಹರಣಕಾರರಿಂದ ಪಾರಾಗಿ ಬಂದಿರುವ ಮುಸ್ತಾಫಾ ಅವರು ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಘಟನೆ ವಿವರ : ಸೆಪ್ಟೆಂಬರ್ 17 ರಂದು ರಾತ್ರಿ 9.30ಕ್ಕೆ ತಾನು ಅಂಗಡಿ ವ್ಯವಹಾರ ಮುಗಿಸಿ ವ್ಯವಹಾರದ ಹಣ 50 ಸಾವಿರ ನಗದು, ಆಧಾರ್ ಕಾರ್ಡ್ , ಪಾನ್ ಕಾರ್ಡ್ 3-4 ಬ್ಯಾಂಕ್‌ಗಳ ಚೆಕ್ ಪುಸ್ತಕಗಳು ಹಾಗೂ ಇನ್ನಿತರ ಅಮೂಲ್ಯ ದಾಖಲೆ ಹಾಗೂ ಐಫೋನ್ -1, ಸ್ಯಾಮಸಂಗ್ ಮೊಬೈಲ್ ಫೋನ್ 1, ಆಪಲ್ ಸ್ಮಾರ್ಟ್ ವಾಚ್ -1 ಹಾಗೂ ಏರ್ ಪೋಡ್-1 ಇವುಗಳನ್ನು ಬ್ಯಾಗಿನಲ್ಲಿ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿಕೊಂಡು ತನ್ನ ವಾಸದ ಪ್ಲ್ಯಾಟ್ ಸಮೀಪ ಹೋಗುತ್ತಿದ್ದಾಗ ಒಂದು ಸ್ವಿಪ್ಟ್ ಕಾರು ಏಕಾಏಕಿ ಅಡ್ಡಲಾಗಿ ಬಂದು ನಿಂತಿದ್ದು, ಅದರ ಚಾಲಕನ ಸೀಟಿನಲ್ಲಿ ಮುಖ್ತಾರ್ ಎಂಬ ಪರಿಚಿತ ಕುಳಿತು ಕೊಂಡಿದ್ದಾನೆನ್ನಲಾಗಿದೆ. ಬಳಿಕ ಅಪರಿಚಿತ ವ್ಯಕ್ತಿಯೋರ್ವ ಕಾರಿನಿಂದ ಇಳಿದು ದೈಹಿಕ ಹಲ್ಲೆ ಮಾಡಿ ಕಾರಿನ ಒಳಗೆ ಎಳೆದುಕೊಂಡಿದ್ದು ಕಾರಿನಲ್ಲಿದ್ದ ಇನ್ನೊರ್ವ ಅಪರಿಚಿತ ವ್ಯಕ್ತಿ ಕೈಯಲ್ಲಿದ್ದ ರಿಲಾಲ್ವರ್‌ ಅನ್ನು ತೋರಿಸಿ ಬೆದರಿಸಿದ್ದಾನೆ. ಓರ್ವ ಆರೋಪಿಯು ಮುಸ್ತಾಫಾ ಎಡಕಣ್ಣಿನ ಕೆಳಗೆ ಮುಷ್ಠಿಯಿಂದ ಬಲವಾಗಿ ಗುದ್ದಿ ಹಲ್ಲೆ ನಡೆಸಿ ಕೈಯನ್ನು ಹಾಗೂ ಬಾಯಿಯನ್ನು ಕಟ್ಟಿ ಕೂಗದಂತೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಕಾರಿನಲ್ಲಿ ತೆರಳುವ ಮಾರ್ಗಮದ್ಯೆ ಓರ್ವ ಮಹಿಳೆ ಕಾರು ಏರಿದ್ದು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಮತ್ತಿಬ್ಬರು ಅಪರಿಚಿತ ಆರೋಪಿಗಳು ಇವರಿಗೆ ಜೊತೆಯಾಗಿದ್ದಾರೆ.

    ಬೆಂಗಳೂರಿನ ಲಾಡ್ಜನ್ನು ಸೇರಿದ ಮೇಲೆ ಜತೆಗಿದ್ದ ಮಹಿಳೆ ತನ್ನ ಮೊಬೈಲ್‌ಗೆ ಮುಸ್ತಾಫಾ ಅವರ ಸಿಮ್ ಕಾರ್ಡ್ ಹಾಕಿ ಮನೆಯವರಿಗೆ ಕರೆ ಮಾಡಿಸಿ‌ ಅವರಿಂದ ತಲಾ ಒಂದೊಂದು‌ ಲಕ್ಷ ಮುಸ್ತಾಫಾ ಖಾತೆಗೆ ಹಾಕಿಸಿಕೊಂಡಿದ್ದು, ಮೊಬೈಲ್‌ ಮೂಲಕ ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ಅವರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾಳೆ. ಮಾತ್ರವಲ್ಲದೇ ಕುಂದಾಫುರದಿಂದ ಬೆಂಗಳೂರಿಗೆ ಹೋಗುವಾಗ ದಾರಿಮಧ್ಯೆಯಲ್ಲಿ ಬೆಂಗಳೂರಿನ ಎಟಿಎಮ್‌ ಹಾಗೂ ಸ್ವೈಪಿಂಗ್ ಮೆಷಿನ್‌ ನಿಂದ ರೂಪಾಯಿ 3,14,175 /- ರೂಪಾಯಿಯನ್ನು ಡ್ರಾ ಮಾಡಿದ್ದಾರೆ. ಅಲ್ಲದೆ ಎಕ್ಸಿಸ್ ಬ್ಯಾಂಕ್‌ನ ಚೆಕ್ ಪುಸ್ತಕವನ್ನು ತೆಗೆದುಕೊಂಡು ಸಹಿ ಮಾಡಲು ಹೇಳಿ ನೀನು ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು ಜಮಾ ಮಾಡಿದರೇ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಒಟ್ಟು 4,64,175 ರೂ. ಹಣವನ್ನು ಹಾಗೂ 1 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

    ಮತ್ತೆ ಹಣಕ್ಕೆ ಬೇಡಿಕೆಯಿಟ್ಟು 2 ಮೊಬೈಲ್, ದಾಖಲೆಗಳನ್ನು ತಮ್ಮಲ್ಲಿಯೇ ಇರಿಸಿಕೊಂಡ ಆರೋಪಿಗಳು ಸೆ.18ರಂದು ರಾತ್ರಿ 9:30ಕ್ಕೆ ಮುಸ್ತಾಫ್ ಅವರನ್ನು ಬಿಟ್ಟಿದ್ದು ಸ್ನೇಹಿತರ ಸಹಾಯದಿಂದ ಅವರು ಸೆ.19ಕ್ಕೆ ಊರು ಸೇರಿದ್ದಾರೆ.
    ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

    Share Information
    Advertisement
    Click to comment

    You must be logged in to post a comment Login

    Leave a Reply