Connect with us

    KARNATAKA

    ಪ್ರಧಾನಿ ಮೋದಿ ವಿಷದ ಹಾವಿದ್ದಂತೆ ನೆಕ್ಕಿದ್ರೆ ಸತ್ತು ಹೋಗ್ತಾರೆ – ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

    ಗದಗ ಎಪ್ರಿಲ್ 27 : ಪ್ರಧಾನಿ ಮೋದಿ ವಿಷದ ಹಾವಿದ್ದಂಗೆ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.


    ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ, ಗದಗ ಜಿಲ್ಲೆಯ‌ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಭಾಷಣದ ವೇಳೆ, ಪ್ರಧಾನಿ ಮೋದಿಯನ್ನು ವಿಷದ ಸರ್ಪಕ್ಕೆ ಹೋಲಿಸಿದ್ದಾರೆ. ಸದ್ಯ ಈ ಹೇಳಿಕೆ ವಿವಾದಕ್ಕೀಡಾಗಿದ್ದು, ಬಿಜೆಪಿ ಖರ್ಗೆ ವಿರುದ್ದ ತಿರುಗಿ ಬಿದ್ದಿದೆ.

    ಇನ್ನು ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಖರ್ಗೆ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ನಾನು ಪ್ರಧಾನಿ ಮೋದಿಗೆ ವಿಷದ ಹಾವು ಎಂದು ಹೇಳಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯುಟರ್ನ್ ಹೊಡೆದಿದ್ದಾರೆ. ಜಿಲ್ಲೆಯ ರೋಣದಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಹಾವು ಇದ್ದಂತೆ ಎಂದು ಹೇಳಿದ್ದು. ನೆಕ್ಕಿ ನೋಡುತ್ತೇನೆ ಅಂದ್ರೆ ಸತ್ತು ಹೋಗ್ತಾರೆ ಅಂತಾ ಹೇಳಿದೆ. ವೈಯಕ್ತಿಕವಾಗಿ ಯಾರಿಗೂ ಹೇಳಿಲ್ಲ, ಯಾರ ಹೆಸರು ಹೇಳಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply