LATEST NEWS
ಮೇ 3 ರಂದು ಮುಲ್ಕಿಗೆ ಮೋದಿ…..!!
ಮಂಗಳೂರು ಎಪ್ರಿಲ್ 25 : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಕೇಂದ್ರ ನಾಯಕರ ದಂಡೆ ಇದೀಗ ಕರ್ನಾಟಕದತ್ತ ಆಗಮಿಸುತ್ತಿದ್ದು, ಇದೀಗ ಕರಾವಳಿಗೆ ಪ್ರಚಾರಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬಿಜೆಪಿ ವತಿಯಿಂದ ಮುಲ್ಕಿಯಲ್ಲಿ ಮೇ 3ರಂದು ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ಮೇ 6 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದು, ಸಮಾವೇಶ ಏರ್ಪಡಿಸುವ ಸ್ಥಳ ಇನ್ನೂ ನಿಗದಿ ಆಗಿಲ್ಲ. ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಕೂಡ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.
ಫಕೀರ ಎಂದು ಕರೆಸಿಕೊಳ್ಳುವ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ₹ 7 ಕೋಟಿಗೂ ಹೆಚ್ಚು ಆಸ್ತಿ ಘೋಷಿಸಿದ ಕುರಿತು ಪ್ರತಿಕ್ರಿಯಿಸಿದ ಕೋಟ, ಅವರು ಯಾವುದೋ ದೀಕ್ಷೆ ತೊಟ್ಟು ಬರಿಗಾಲಿನಲ್ಲಿ ನಡೆಯುತ್ತಾರೆ. ಹಾಗಾಗಿ ಅವರನ್ನು ಬರಿಗಾಲಿನ ಫಕೀರ ಎಂದೆ. ಅವರು ಬರಿಗಾಲಿಗೆ ಮಾತ್ರ ಫಕೀರ. ಪದಬಳಕೆಯಲ್ಲಿ ತಪ್ಪಾಗಿದ್ದರೆ ಸರಿ ಪಡಿಸಿಕೊಳ್ಳೋಣ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
You must be logged in to post a comment Login