Connect with us

    LATEST NEWS

    ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂ ಇಲ್ಲ

    ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂ ಇಲ್ಲ

    ಮಂಗಳೂರು ಡಿಸೆಂಬರ್ 21: ಮಂಗಳೂರಿನಲ್ಲಿ ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂವನ್ನು ಸಡಿಸಲಾಗುವುದು, ಹಾಗೂ ಸೋಮವಾರದಿಂದ ಮಂಗಳೂರಿನಲ್ಲಿ ಕೇವಲ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

    ಮಂಗಳೂರಿನ ಸರ್ಕುಟ್ ಹೌಸ್ ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂ ಸಡಿಲಿಸಲಾಗುವುದು ನಂತರ ಸಂಜೆ 6 ರಿಂದ ಮತ್ತೆ ಕರ್ಪ್ಯೂ ಮುಂದುವರೆಯಲಿದೆ ಎಂದರು. ನಾಳೆ ಬೆಳಿಗ್ಗೆ 6 ರಿಂದ ಸಂಜೆಯ 6 ವರೆಗೆ ನಗರದಲ್ಲಿ ಕರ್ಪ್ಯೂ ತೆಗೆದು ಹಾಕಲಾಗುವುದು ನಂತರ ಮತ್ತೆ ಕರ್ಪ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದರು. ಅಲ್ಲದೆ ಸೋಮವಾರದಿಂದ ಕರ್ಪ್ಯೂ ಸಂಪೂರ್ಣ ತೆಗೆದುಹಾಕಲಾಗುವುದು, ಶಾಂತಿ ಸುವ್ಯವಸ್ಥೆ ಕಾಪಾಡಲು ಕೇವಲ ಸೆಕ್ಷನ್ 144 ಜಾರಿಯಲ್ಲಿರುತ್ತದೆ ಎಂದರು.

    ಮೊನ್ನೆ ಗಲಭೆ ಸಂಧರ್ಭದಲ್ಲಿ ಪೊಲೀಸರು ಅನಿವಾರ್ಯವಾಗಿ ಗೊಲಿಬಾರ್ ನಡೆಸಬೇಕಾಗಿ ಬಂದಿದ್ದು, ಮೃತರ ಕುಟುಂಬಕ್ಕೆ ಕಾನೂನು ಪ್ರಕಾರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

    ಡಿಸೆಂಬರ್ 25 ರಂದು ಕ್ರಿಸ್ಮಸ್ ಸಂಭ್ರಮಾಚರಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೆನೆ ಎಂದು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply