KARNATAKA
ಜೂನ್ 7 ಅಥವಾ 8ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ಮೇ 19ರಂದು ನೈಋತ್ಯ ಮುಂಗಾರು ಮಾರುತಗಳು ಅಂಡಮಾನ್ ನಿಕೋಬಾರ್ ಮೂಲಕ ಭಾರತವನ್ನು ಪ್ರವೇಶ ಮಾಡಲಿವೆ. ಮೇ 31 ರಂದು ಕೇರಳಕ್ಕೆ ಮಾರುತಗಳು ಪ್ರವೇಶಿಸಲಿದ್ದು, . ಜೂನ್ ಮೊದಲ ವಾರದಲ್ಲಿ ಈ ಮಾರುತಗಳು ಕರ್ನಾಟಕವನ್ನು ಪ್ರವೇಶ ಮಾಡಲಿವೆ. ಆದ್ದರಿಂದ ಜೂನ್ 7 ಅಥವಾ 8 ರಂದು ಮುಂಗಾರು ಮಳೆ ಶುರುವಾಗಲಿದೆ. ಈ ಬಾರಿ ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login