Connect with us

    LATEST NEWS

    ಮೇ ಅಂತ್ಯಕ್ಕೆ ರಾಜ್ಯಕ್ಕೆ ಮುಂಗಾರು…..!!

    ಮಂಗಳೂರು ಮೇ 14: ಮಾನ್ಸೂನ್ ಮಳೆ ಈ ಬಾರಿ ವಾಡಿಕೆಗಿಂದ ಮೊದಲೆ ರಾಜ್ಯಕ್ಕೆ ಕಾಲಿಡಲಿದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.

    ಪ್ರತಿಭಾರಿ ಕೇರಳಕ್ಕೆ ಜೂನ್ 1 ರ ಬಳಿಕ ಮುಂಗಾರು ಮಳೆ ಪ್ರಾರಂಭವಾಗುತ್ತಿತ್ತು, ಮೂರು ದಿನಗಳ ಬಳಿಕ ಕರ್ನಾಟಕ ಕರಾವಳಿಗೆ ಮುಂಗಾರು ಪ್ರವೇಶಿಸುತ್ತಿತ್ತು, ಆದರೆ ಈ ಬಾರಿ ವಾಡಿಕೆಗಿಂತ ಮೊದಲೇ ಮಾನ್ಸೂನ್ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 27ಕ್ಕೆ ಕೇರಳಕ್ಕೆ, ಬಳಿಕ 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಮುಂಗಾರು ರಾಜ್ಯದ ಕರಾವಳಿಗೆ ಪ್ರವೇಶಿಸಿ, ಬಳಿಕ 3 ದಿನಗಳಲ್ಲಿ ದಕ್ಷಿಣ ಹಾಗೂ ಉತ್ತರ ಒಳನಾಡಿಗೆ ಪ್ರವೇಶಿಸುತ್ತದೆ. ಹೀಗಾಗಿ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply