Connect with us

DAKSHINA KANNADA

ಮೂಡುಬಿದರೆ: ಗೋವು ಅಕ್ರಮ ಸಾಗಾಟಕ್ಕೆ ವಿಫಲ ಯತ್ನ : 2 ಸೆರೆ, 3 ಪರಾರಿ..!

ಮೂಡುಬಿದಿರೆ: ಅಕ್ರಮವಾಗಿ ದನ ಮತ್ತು ಕರುಗಳನ್ನು ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಸಾಗಿಸುವ ಪ್ರಯತ್ನವೊಂದನ್ನು ಮೂಡುಬಿದಿರೆ ಪೊಲೀಸರು ವಿಫಲಗೊಳಿಸಿದ್ದಾರೆ.

ಮೂಡುಕೊಣಾಜೆ ಗ್ರಾಮದ ಕುಕ್ಕುದಕಟ್ಟೆಯಲ್ಲಿ ಮಂಗಳವಾರ ನಸುಕಿನ ಜಾವ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಎರಡು ಹಸು ಹಾಗೂ ಎರಡು ಕರುಗಳನ್ನು ರಕ್ಷಿಸಿದ್ದಾರೆ. ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಕುಮಾರ್‌ ನೇತೃತ್ವದ ತಂಡವು ರಾತ್ರಿ ಗಸ್ತಿನಲ್ಲಿದ್ದಾಗ ಪಡುಕೊಣಾಜೆಯಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಪಿಕಪ್‌ ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಎರಡು ಹಸು ಮತ್ತು ಎರಡು ಕರು ಪತ್ತೆಯಾಗಿವೆ.ವಾಹನ ಚಾಲಕ ವೇಣೂರಿನ ನಡ್ತಿಕಲ್ಲು ನಿವಾಸಿ ಹೈದರ್‌ ಹಾಗೂ ಪಣಪಿಲದ ಶೈಲೇಶ್‌ ಮಡಿವಾಳನನ್ನು ಪೊಲೀಸರು ಬಂಧಿಸಿದ್ದಾರೆ. ಗಂಟಾಲ್ಕಟ್ಟೆಯ ಫಾರೂಕ್‌, ನಿಸಾರ್‌ ಮತ್ತು ಪಣಪಿಲದ ಹೆರಾಲ್ಡ್‌ ಫೆರ್ನಾಂಡಿಸ್‌ ತಪ್ಪಿಸಿಕೊಂಡಿದ್ದಾರೆ.ಬಂಧಿತ ಆರೋಪಿಗಳನ್ನು ಪೊಲೀಸರು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಶಪಡಿಸಿಕೊಂಡ ಹಸುಗಳನ್ನು ಬಜಪೆ ಗೋಶಾಲೆಗೆ ಹಸ್ತಾಂತರಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *