Connect with us

    DAKSHINA KANNADA

    ಮೂಡುಬಿದಿರೆ: ಟೂರಿಸ್ಟ್ ಬಸ್ ಪಲ್ಟಿ; ಹಲವು ಮಂದಿಗೆ ಗಾಯ

    ಮೂಡುಬಿದಿರೆ, ಆಗಸ್ಟ್ 26: ಪಡ್ಡಂದಡ್ಕ ಗಾಂಧೀನಗರ ತಿರುವಿನಲ್ಲಿ‌ ಶುಕ್ರವಾರ ರಾತ್ರಿ ವಿಶಾಲ್ ಟೂರಿಸ್ಟ್ ಬಸ್ ಪಲ್ಟಿಯಾಗಿ ಹಲವು ಮಂದಿಗೆ ಗಾಯಗಳಾಗದ ಘಟನೆ ನಡೆದಿದೆ.ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಕಾರ್ಕಳ ಮೂಡುಬಿದಿರೆಯಾಗಿ ಬೆಂಗಳೂರಿಗೆ ಸಾಗುವ ವಿಶಾಲ್ ಟೂರಿಸ್ಟ್ ಆಗಿದ್ದು, ಬೆಳ್ತಂಗಡಿ ತಾಲೂಕಿನ ಪಡ್ಡಂದಡ್ಕ, ಗಾಂಧೀನಗರದ ನಡುವೆ ಅಪಘಾತಕ್ಕೀಡಾಗಿದೆ.

    ಒಟ್ಟು 27 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಊರವರು ಜಮಾಯಿಸಿದ್ದಾರೆ. ತಕ್ಷಣ ಅಂಬ್ಯುಲೆನ್ಸ್ ಸೇವೆಯ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply