Connect with us

    LATEST NEWS

    ವಿದ್ಯಾಗಮ ಯೋಜನೆಯಿಂದಾಗಿ ಕೊರೊನಾ ಸೊಂಕಿಗೆ ಒಳಗಾಗಿದ್ದ ಶಿಕ್ಷಕಿ ಪದ್ಮಾಕ್ಷಿ ಸಾವು

    ಮಂಗಳೂರು ಅಕ್ಟೋಬರ್ 16: ರಾಜ್ಯ ಸರಕಾರದ ವಿದ್ಯಾಗಮ ಯೋಜನೆಯಿಂದಾಗಿ ಕೊರೊನಾ ಸೊಂಕಿಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಇಂದು ಮೃತಪಟ್ಟಿದ್ದಾರೆ.
    ವಿದ್ಯಾಗಮ ಯೋಜನೆಯಡಿ ಮಕ್ಕಳಿಗೆ ಪಾಠ ಮಾಡಲು ತೆರಳುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಅವರಿಗೆ ಸೆಪ್ಟೆಂಬರ್ 29ರಂದು ಕೋವಿಡ್-19 ದೃಢಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


    ಶಿಕ್ಷಕಿಗೆ ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ತಾಯಿಯ ಚಿಕಿತ್ಸೆಗೆ ಸಹಕರಿಸುವಂತೆ ಕೋರಿ ಪುತ್ರಿ ಐಶ್ವರ್ಯಾ ಫೇಸ್ ಬುಕ್ ನಲ್ಲಿ ಮಾಡಿಕೊಂಡ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಇಂದು ಸಾವನ್ನಪ್ಪಿದ್ದಾರೆ.

    ಕೋವಿಡ್ ನೆಗೆಟಿವ್ ಎಂದು ಕಂಡುಬಂದಿದ್ದರೂ ಪದ್ಮಾಕ್ಷಿ ಅವರ ಆರೋಗ್ಯಸ್ಥಿತಿ ಗುರುವಾರ ಅಪರಾಹ್ಣ ವಿಷಮಿಸತೊಡಗಿದ ಕಾರಣ ಪತಿ ಶಶಿಕಾಂತ್ , ಪುತ್ರಿ ಐಶ್ವರ್ಯ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಎಕ್ಮೋ ಚಿಕಿತ್ಸೆಗಾಗಿ ಏರ್ ಲಿಫ್ಟ್ ಮೂಲಕ ಬೆಂಗಳೂರು ಗೆ ಒಯ್ಯಲು ಸಿದ್ಧತೆ ನಡೆಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply