Connect with us

    DAKSHINA KANNADA

    ಮೂಡುಬಿದಿರೆ: ಕಾರು- ಬೈಕ್ ಢಿಕ್ಕಿ, ಬೈಕ್ ಸವಾರ ಮೃತ್ಯು

    ಮೂಡುಬಿದಿರೆ, ಎಪ್ರಿಲ್ 09: ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

    ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ ಕ್ರಾಸ್ ಆಗಿ  ಲಾಡಿಗೆ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ.

    ಈ ವೇಳೆ ಗಂಭೀರವಾಗಿ ಗಾಯಗೊಂಡ ಉಮೇಶ್ ಅವರನ್ನು ಮೂಡುಬಿದಿರೆಯ ಖಾಸಗಿ  ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply