DAKSHINA KANNADA
ಕುಕ್ಕೆಸುಬ್ರಹ್ಮಣ್ಯ ನೈತಿಕ ಪೊಲೀಸ್ ಗಿರಿ – ಇಬ್ಬರು ಪೊಲೀಸ್ ವಶಕ್ಕೆ
ಸುಬ್ರಹ್ಮಣ್ಯ ಜನವರಿ 09: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಧಾಕೃಷ್ಣ (45) ಮತ್ತು ವಿಶ್ವಾಸ್ (19) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿನಿಯೊಬ್ಬಳಜೊತೆ ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಬಳಿ ಗುರುವಾರ ಸಂಜೆ ಮಾತನಾಡುತ್ತಿದ್ದಾಗ ಪರಿಚಯವಿಲ್ಲದ ಎರಡು–ಮೂರು ಜನರು ನನ್ನನ್ನು ಬಲವಂತದಿಂದ ಎಳೆದೊಯ್ದು ಜೀಪಿನಲ್ಲಿ ಹಾಕಿದರು. ಮತ್ತೆ ಐದಾರು ಜನ ಸೇರಿ ಸಮೀಪದ ಕುಮಾರಧಾರ ಜಂಕ್ಷನ್ ಬಳಿಯ ಹಳೆ ಕಟ್ಟಡದ ಕೊಣೆಯೊಳಗೆ ಕರೆದೊಯ್ದು ಕೂಡಿಹಾಕಿದರು. ಸುಮಾರು 10-12 ಮಂದಿ ಸೇರಿ ದೊಣ್ಣೆ ಮತ್ತು ಬೆತ್ತಗಳಿಂದ ನನಗೆ ಹೊಡೆದ್ದರು’ ಎಂದು ಆಫೀದ್ ದೂರಿನಲ್ಲಿ ತಿಳಿಸಿದ್ದರು. ಹಲ್ಲೆಗೊಳಗಾದ ಯುವಕ ಆಫೀದ್ ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತನ ವಿರುದ್ಧ ಬಾಲಕಿಯ ತಾಯಿ ಪ್ರತಿ ದೂರು ನೀಡಿದ್ದು ಬಾಲಕಿಯ ತಾಯಿ ಪ್ರತಿ ದೂರು ನೀಡಿದ್ದು, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು
ಇದೀ ಹಪೀಜ್ ಗೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳಿಬ್ಬರನ್ನೂ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ‘ಬಂಧಿತರಿಬ್ಬರೂ ಕಡಬ ಸುಬ್ರಹ್ಮಣ್ಯ ಪರಿಸರದವರು. ಪ್ರಕರಣದ ಇತರ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರಿದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೊನಾವಣೆ ಮಾಹಿತಿ ನೀಡಿದರು.
You must be logged in to post a comment Login