DAKSHINA KANNADA
ಕಡಬ – ನೈತಿಕ ಪೊಲೀಸ್ ಗಿರಿ ಮುಸ್ಲಿಂ ಯುವಕನ ಮೇಲೆ ಹಲ್ಲೆ ಆರೋಪ – ದೂರು ದಾಖಲು
ಕಡಬ ಎಪ್ರಿಲ್ 06: ಹಿಂದೂ ಯುವತಿಯ ಜೊತೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಸಂದರ್ಭ ಕೆಲ ವಕ್ತಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದೂರು ದಾಖಲಿಸಿದ್ದಾನೆ.
ಮಂಗಳವಾರ ಮಧ್ಯಾಹ್ನ 12.15 ಗಂಟೆಗೆ ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ನಜೀರ್ (21 ವರ್ಷ) ಎಂಬಾತ ತನ್ನ ಅನ್ಯಧರ್ಮಿಯ ಯುವತಿಯೊಂದಿಗೆ ಆಟೋದಲ್ಲಿ ಹೋಗುತ್ತಿದ್ದ ವೇಳೆ ಸುರೇಂದ್ರ, ತೀರ್ಥ ಪ್ರಸಾದ್, ಜಿತೇಶ್ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಲಚಂದ್ರ ಹಾಗೂ ರಂಜಿತ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ನಝೀರ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎ.5ರಂದು ಮಧ್ಯಾಹ್ನ ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿಕೊಂಡು ಉಪ್ಪಿನಂಗಡಿಯಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡ್ಯಕ್ಕೆ ತೆರಳಿದ್ದೆವು. ಬಳಿಕ ಅಲ್ಲಿಂದ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿಗೆ ತೆರಳುವಾಗ ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್ ಹಾಗೂ ಇತರರು ನಮ್ಮ ಆಟೊ ರಿಕ್ಷಾವನ್ನು ತಡೆದು ನಿಲ್ಲಿಸಿ ನಮ್ಮನ್ನು ವಿಚಾರಿಸಿದ್ದು, ತಾನು ಹಾಗೂ ತನ್ನ ಜೊತೆಯಲ್ಲಿದ್ದ ಯುವತಿ ಹೆಸರು ಹೇಳಿದಾಗ ಆರೋಪಿಗಳು ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಿನಗೆ ತಿರುಗಾಡಲು ಇತರ ಧರ್ಮೀಯ ಯುವತಿಯೇ ಆಗಬೇಕಾ ಎಂದು ಹೇಳುತ್ತಾ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ.
You must be logged in to post a comment Login