KARNATAKA
ಹಾವೇರಿ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನ ಸಾವು
ಹಾವೇರಿ, ಜೂನ್ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರಾ ಬಾಯಿ(65), ಪುಣ್ಯ(50), ಮಂಜುಳಾಬಾಯಿ, ಚಾಲಕ ಆದರ್ಶ್(23), ಮಾನಸ(24), ರೂಪಾ(40), ಮಂಜುಳಾ(50) ಮೃತರು ಮೃತಪಟ್ಟವರು.
ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಎಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.
ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತ ದುರ್ದೈವಿಗಳು. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಂಶಿಕುಮಾರ್ ಮಾಹಿತಿ ನೀಡಿದ್ದಾರೆ.
You must be logged in to post a comment Login