Connect with us

    LATEST NEWS

    ಭಟ್ಕಳ : ಒಂದೇ ದಿನ ನೇಣಿಗೆ ಕೊರಳೊಡ್ಡಿದ ತಾಯಿ – ಮಗಳು..!

    ಭಟ್ಕಳ :  ತಾಯಿ ಮಗಳು ಒಂದೇ ದಿನ ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ದಾರುಣ  ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಎಂಬಲ್ಲಿ ನಡೆದಿದೆ.

    ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ ಮಗಳು ಮಾದೇವಿ ದೊಡ್ಡಯ್ಯ ನಾಯ್ಕ (36) ಮೃತ ದುರ್ದೈವಿಗಳಾಗಿದ್ದಾರೆ. ಇಬ್ಬರ ಸಾವಿಗೆ ಕಾರಣ ಇನ್ನೂ ಕೂಡ ಅಸ್ಪಷ್ಟವಾಗಿದ್ದು ಈ ನಿಟ್ಟಿನಲ್ಲಿ ಪೊಲೀಸ್ ತನಿಖೆ ಮುಂದುವರೆದಿದೆ. ಕೃಷ್ಣಮ್ಮ ಅವರ ಮಗಳು ಮಾದೇವಿ ತಾಯಿಯ ಮನೆಯ ಸಮೀಪದಲ್ಲಿಯೇ ಮನೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಂಡು ಬಂದಿದ್ದಳು. ಓರ್ವ ಮಗಳು ಹಾಗೂ ಓರ್ವ ಮಗನಿದ್ದಾನೆ. ಇಂದು ಮನೆಯಲ್ಲಿದ್ದವರೆಲ್ಲರೂ ಸಂಬಂಧಿಕರ ಮದುವೆ ಹೋಗಿರುವುದರಿಂದ ಒಬ್ಬಳೇ ಇದ್ದ ಮಾದೇವಿ ನೇಣಿಗೆ ಶರಣಾಗಿದ್ದಾಳೆ.ಮಾದೇವಿ ಮನೆಗೆ ಬಂದ ಕೃಷ್ಣಮ್ಮ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದನ್ನು ಕಂಡವಳೇ ಮನೆಗೆ ಹೋಗಿ ತಾನೂ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಈ ಮದ್ಯೆ ಮಾದೇವಿ ಈಕೆಯು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಶವವನ್ನು ತಾಯಿ ಹಾಗೂ ಸಹೋದರ ನೋಡಬಾರದು ಎಂದು ಬರೆದಿಟ್ಟಿದ್ದಾಳೆ ಎನ್ನಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ  ಪ್ರಕರಣ ದಾಖಲು ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply