DAKSHINA KANNADA
ಅನಾರೋಗ್ಯದಿಂದ 2 ತಿಂಗಳ ಬಾಣಂತಿ ಸಾವು
ಪುತ್ತೂರು ಜೂನ್ 27: ಅನಾರೋಗ್ಯದಿಂದ 2 ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವನಪ್ಪಿರುವ ಘಟನೆ ಕೃಷ್ಣ ನಗರದಲ್ಲಿ ನಡೆದಿದೆ.
ಮೃತರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಎಂದು ಗುರುತಿಸಲಾಗಿದ್ದು,ಸ ಅವರು 2 ತಿಂಗಳ ಹಿಂದೆಯಷ್ಟೆ ಅವರು ಮಗುವಿಗೆ ಜನ್ಮ ನೀಡಿದ್ದರು, ನಂತರ ಅನಾರೋಗ್ಯದಿಂದಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
You must be logged in to post a comment Login