KARNATAKA
ಚಪ್ಪಲಿ ಹಾಕಿಕೊಂಡು ದೈವದ ದೀವಟಿಗೆ ಹಿಡಿದು ನಿಂತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು ಡಿಸೆಂಬರ್ 05: ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಳಿ ಬಂದಿದೆ. ಚಪ್ಪಿಲಿ ಧರಿಸಿ ದೈವದ ದೀವಟಿಗೆ ಹಿಡಿದು ಸಂಸದರು ನಿಂತಿರುವ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.
ನಿನ್ನೆ ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದನ್ನು ನಾವು ಕಾಣಬಹುದಾಗಿದೆ.
ಫೋಟೋ ವೈರಲ್ ಬೆನ್ನಲ್ಲೇ ದೈವಾರಾಧನೆಗೆ ತೇಜಸ್ವಿ ಅವಮಾನ ಮಾಡಿದ್ದಾರೆ ಅಂತಾ ಆಕ್ರೋಶ ಹೊರಬಿದ್ದಿದೆ. ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದರು ಡಿಲೀಟ್ ಮಾಡಿದ್ದಾರೆ.
You must be logged in to post a comment Login