Connect with us

    KARNATAKA

    ಬಿಜೆಪಿ ರಾಜ್ಯಾದ್ಯಕ್ಷರಾಗಿ ಸಂಸದ ನಳಿನ್ ಕುಮಾರ ಕಟೀಲ್ ನೇಮಕ ಮಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

    ಬಿಜೆಪಿ ರಾಜ್ಯಾದ್ಯಕ್ಷರಾಗಿ ಸಂಸದ ನಳಿನ್ ಕುಮಾರ ಕಟೀಲ್ ನೇಮಕ ಮಂಗಳೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

    ಮಂಗಳೂರು ಅಗಸ್ಟ್ 20: ಬಿಜೆಪಿಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಿಸಲಾಗಿದೆ.

    ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ದೇಶನದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯ ನಳಿನ್‌ ಕುಮಾರ್ ಕಟೀಲ್ 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. 2009 ರಲ್ಲಿ ಮೊದಲ ಬಾರಿಗೆ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾದರು. ಆ ಬಳಿಕ 2014 ಮತ್ತು 2019 ರಲ್ಲಿಯೂ ನಿರಂತರವಾಗಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

    ಬಿಜೆಪಿಯ ಸಿದ್ದಾಂತದ ಪ್ರಕಾರ ಒಬ್ಬರಿಗೆ ಒಂದೇ ಹುದ್ದೆ , ಈ ಹಿನ್ನಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನವನ್ನು ಸಿಎಂ ಯಡಿಯೂರಪ್ಪ ಅವರಿಂದ ಹಿಂಪಡೆದಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ನೀಡಲಾಗಿದೆ.

    ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷರಾಗಿ ಆಯ್ಕೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply