Connect with us

    DAKSHINA KANNADA

    ಸಂಸದ ಪ್ರತಾಪ್ ಸಿಂಹ ಬಂಧನ : ಸಂಸದ ಕಟೀಲ್ ತೀವ್ರ ಖಂಡನೆ

    ಸಂಸದ ಪ್ರತಾಪ್ ಸಿಂಹ ಬಂಧನ : ಸಂಸದ ಕಟೀಲ್ ತೀವ್ರ ಖಂಡನೆ

     

    ಮಂಗಳೂರು, ಡಿಸೆಂಬರ್ 04 : ಲೋಕಾಸಭಾ ಸದಸ್ಯ ಪ್ರತಾಪಸಿಂಹ ಅವರನ್ನು‌ ಬಂಧಿಸಿರುವ ಪೊಲೀಸರ ಕ್ರಮವನ್ನು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.

    ಈ ಬಗ್ಗೆ ಹೇಳಿಕೆ ನೀಡಿರುವ ಕಟೀಲ್ ಅವರು ಹಿಂದು ಪರ ಸಂಘಟನೆಗಳನ್ನು ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ. ಎಂದು ಅರೋಪಿಸಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾಲೆ ಧರಿಸಿದ ಹಿಂದು ಯುವಕರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಮುಖ್ಯಮಂತ್ರಿಯವರ ಕುಮ್ಮಕ್ಕಿನಿಂದಲೇ ಪೊಲೀಸರು ಇಂತಹ ಕಾರ್ಯ ನಡೆಸುತ್ತಿರುವುದು ಸ್ಪಷ್ಟವಾಗಿದೆ.

    ಸಂಸದ ಪ್ರತಾಪ್ ಬಿಡುಗಡೆಗೆ ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಅಹಿತಕರ ಘಟನೆಗಳು ನಡೆದರೆ ರಾಜ್ಯ ಸರ್ಕಾರವೇ ಅದಕ್ಕೆ ನೇರ ಹೊಣೆ ಎಂದು ಅವರು ಹೇಳಿದ್ದಾರೆ.

    ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ :

    ಸಂಸದ ಪ್ರತಾಪ್ ಸಿಂಹ ಅವರ ಬಂಧನ ಖಂಡಿಸಿ ಮಂಗಳೂರಿಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

    ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರಿಲ್ಲಿರುವ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಅವರ ಕಚೇರಿ ಮುಂದೆ ಅಪರಾಹ್ನ ಪ್ರತಿಭಟನೆಯನ್ನು ಅಯೋಜಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply