Connect with us

    LATEST NEWS

    ಹುಸೇನಬ್ಬ ಪ್ರಕರಣ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ – ಶೋಭಾ ಕರಂದ್ಲಾಜೆ

    ಹುಸೇನಬ್ಬ ಪ್ರಕರಣ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ – ಶೋಭಾ ಕರಂದ್ಲಾಜೆ

    ಉಡುಪಿ ಜೂನ್ 4: ದನದ ವ್ಯಾಪಾರಿ ಹುಸೇನಬ್ಬ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ ಪಿ ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್, ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು.

    ದನ ಕಳ್ಳ ಸಾಗಣೆ ಸಂದರ್ಭ ಹುಸೇನಬ್ಬ ಅನುಮಾನಾಸ್ಪದ ಸಾವಾಗಿದ್ದು, ನಮ್ಮ ಕಾರ್ಯಕರ್ತರು ದನಗಳ್ಳತನದ ಮಾಹಿತಿ ಪೊಲೀಸರಿಗೆ ಕೊಟ್ಟಿದ್ದರು. ಹಿರಿಯಡ್ಕ ಎಸ್ ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದರು. ಸಂಘಪರಿವಾರಕ್ಕೂ ಈ ಸಾವಿಗೂ ಸಂಬಂಧವಿಲ್ಲ, ಈ ಪ್ರಕರಣ ಸಂಬಂಧ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ, ಇದರ ಹಿಂದೆ ರಾಜ್ಯದ ಸಮ್ಮಿಶ್ರ ಸರಕಾರದ ಕುಮ್ಮಕ್ಕು ಇದೆ ಎಂದು ಹೇಳಿದರು. ರಾಜ್ಯ ಸರ್ಕಾರ ಬಿಜೆಪಿ ಮತ್ತು ಸಂಘಪರಿವಾರದ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಆರೋಪಿಸಿದರು.

    ಹುಸೇನಬ್ಬ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನಷ್ಟೇ ತನಿಖೆಗೆ ಒಳಪಡಿಸಬೇಕಾಗಿದ್ದು, ನಿರಪರಾಧಿ ಕಾರ್ಯಕರ್ತರನ್ನು ಬಂಧಿಸಿದೆ ಹಿಂಸಿಸದೇ ಅವರನ್ನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

    ಹುಸೇನಬ್ಬ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳು ಇದ್ದವು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ ಈ ಹಿನ್ನಲೆಯಲ್ಲಿ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ಹೇಳಿದರು.

    ರಾಜ್ಯ ಸರಕಾರ ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರುದ್ದ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply