Connect with us

LATEST NEWS

ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಕೊಲೆ

ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಕೊಲೆ

ಕಾಸರಗೋಡು ಅಗಸ್ಟ್ 6: ಕಾಸರಗೋಡಿನ ಉಪ್ಪಳದಲ್ಲಿ ಸಿಪಿಎಂ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಉಪ್ಪಳ ಸೋಂಕಾಲಿನ ಅಬೂಬಕ್ಕರ್ ಸಿದ್ದೀಕ್ ಕೊಲೆಗೀಡಾದ ದುರ್ದೈವಿಯಾಗಿದ್ದು ಭಾನುವಾರ ತಡ ರಾತ್ರಿ 11 ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಎರಡು ಬೈಕಿನಲ್ಲಿ ಆಗಮಿಸಿದ ತಂಡ ಸಿದ್ದಿಕ್ ನನ್ನು ಇರಿದು ಬೈಕನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಗಂಭೀರಾವಸ್ಥೆಯಲ್ಲಿದ್ದ ಸಿದ್ದೀಕ್ ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.

ಕೊಲ್ಲಿ ರಾಷ್ಟ್ರ ಖತಾರಿನಲ್ಲಿ ಉದ್ಯೋಗದಲ್ಲಿದ್ದ ಅಬೂಬಕ್ಕರ್ ಸಿದ್ದೀಕ್ ಹತ್ತು ದಿವಸಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.

ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಕಾಸರಗೋಡು ಡಿವೈಎಸ್ಪಿ ಎಂ.ವಿ ಸುಕುಮಾರನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಖಂಡಿಸಿ ಮಂಜೇಶ್ವರ ವ್ಯಾಪ್ತಿಯಲ್ಲಿ ಹರತಾಳ ಆಚರಿಸಲಾಗುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *