Connect with us

KARNATAKA

ಕಾಂಗ್ರೇಸ್ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

ಬೆಂಗಳೂರು ಮೇ 29: ರಾಜ್ಯಸಭೆ ಅಥವಾ ಎಂಎಲ್ ಸಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮುಖ್ಯಮಂತ್ರಿ ಚಂದ್ರು ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಚಂದ್ರು ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್​ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದೆ. ಅಂದಿನಿಂದಲೂ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಎಂಎಲ್​​ಸಿ ಅಥವಾ ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿರಿಯ ಮುಖಂಡ ಚಂದ್ರು ಅವರನ್ನು ಪರಿಗಣಿಸದೇ ಇರೋದು ಹಾಗೂ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ ಗುರುತಿಸಲಿಲ್ಲ ಎಂಬ ಬೇಸರದಿಂದ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *