LATEST NEWS
ಕಿನ್ನಿಗೋಳಿ : ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ, ಆರೋಪಿ ಬಂಧನ..!
ಕಿನ್ನಿಗೋಳಿ : ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಕಿನ್ನಿಗೋಳಿಯ ದಾಮಸ್ಕಟ್ಟೆ ಬಳಿ ಕಾಮುಕನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ಕೊಡಲೆತ್ನಿಸಿದ ಘಟನೆ ನಡೆದಿದೆ.
ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟ್ಟೆ ಕ್ರಾಸ್ ಸಮೀಪದ ಉಳೆಪಾಡಿ ನಿವಾಸಿ ಬಾಬು ಮುಖಾರಿ ಆರೋಪಿ. ವಿದ್ಯಾರ್ಥಿನಿ ದಾಮಸ್ ಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ಸುಂಕದಕಟ್ಟೆ (ಪಟ್ಟೆ) ರಸ್ತೆಯಲ್ಲಿ ಹೋಗುತ್ತಿರುವಾಗ ಆರೋಪಿ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ ಎನ್ನಲಾಗಿದೆ. ಆರೋಪಿಯನ್ನು ತಳ್ಳಿ ಹಾಕಿ ವಿದ್ಯಾರ್ಥಿನಿ ಓಡಿ ಹೋಗಿದ್ದು, ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳೀಯರ ಸಹಕಾರದಿಂದ ಮೂಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login