Connect with us

    DAKSHINA KANNADA

    ಮುಲ್ಕಿ : ಐಕಳ ಹರೀಶ್‌ ಶೆಟ್ಟಿ ಮನೆ ಕಳವು ಪ್ರಕರಣ, ಮತ್ತೆ ಮೂವರು ಆರೋಪಿಗಳ ಬಂಧನ..!

    ಮಂಗಳೂರು : ಹೋಟೆಲ್‌ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಯವರ  ಐಕಳದ ಮನೆಯಲ್ಲಿ ನಡೆದ ಕಳವು  ಪ್ರಕರಣದಲ್ಲಿ ಶಾಮೀಲಾಗಿದ್ದ  ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಕಳವಿನ ಬಳಿಕ ಈ ಆರೋಪಿಗಳು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದರು. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್‌ ಹಾಗೂ ಕಾಸರಗೋಡು ನಿವಾಸಿ ಕಲಾಮ್‌ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಸುಹೈಲ್ ಹಾಗೂ ಝುಬೈರ್‌ ಈ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಂ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್‌ ಪೋರ್ಟ್‌ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
    ಬಂಧಿತರಿಂದ ನಕಲಿ ಪಾಸ್‌ ಪೋರ್ಟ್‌, ಮೊಬೈಲ್‌ ಫೋನ್‌, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಳೆದ ವರ್ಷ ಐಕಳದಲ್ಲಿರುವ ಉದ್ಯಮಿ ಹರೀಶ್‌ ಶೆಟ್ಟಿ ಐಕಳ ಅವರ ಮನೆಯಲ್ಲಿ ಕಳವು ಮಾಡಿದ್ದರು. ಬಳಿಕ ಕಾಸರಗೋಡು ನಿವಾಸಿ ಕಲಾಂನ ಸಹಕಾರ ಪಡೆದು ನಕಲಿ ಪಾಸ್‌ಪೋರ್ಟ್‌ ಮಾಡಿಸಿಕೊಂಡು ವಿದೇಶಕ್ಕೆ ಪಲಾಯನ ಮಾಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳ ಸುಳಿವು ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿ, ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ. ಮುಲ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply