Connect with us

    LATEST NEWS

    ಮುಂಬೈ ತಡೆಗೋಡೆ ಕುಸಿತ 11ಕ್ಕೂ ಅಧಿಕ ಮಂದಿ ಸಾವು…!!

    ಮುಂಬೈ ಜುಲೈ 18: ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಾಂಪೌಂಡ್ ಗೊಡೆ ಕುಸಿದು ಕನಿಷ್ಠ 11 ಮಂದಿ ಸಾವನಪ್ಪಿರುವ ಘಟನೆ ನಡೆದಿದ್ದು, ಹಲವಾರು ಜನರು ಮಣ್ಣಿನಡಿ ಸಿಲಕಿದ್ದು, ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


    ಮಹಾರಾಷ್ಟ್ರದ ಚೆಂಬೂರಿನ ಭಾರತಿ ನಗರ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಕಾಂಪೌಂಡ್ ಗೋಡೆ ಕುಸಿದಿದ್ದು, ಗೋಡೆ ಅಲ್ಲಿದ್ದ ಗುಡಿಸಲುಗಳು ಮೇಲೆ ಬಿದಿದ್ದು, ಈ ವೇಳೆ ಅಲ್ಲಿದ್ದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

    ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 2 ತಂಡ ದೌಡಾಯಿಸಿದ್ದು,ಅಗ್ನಿ ಶಾಮಕ ದಳದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಮಹಾರಾಷ್ಟ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply