LATEST NEWS
ಮುಂಬೈ: ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ತಂಡದ ಕಾರ್ಯಾಚರಣೆ, ಕೋಟ್ಯಾಂತರ ರೂ. ಮೌಲ್ಯದ ನಿಷೇಧಿತ ಗುಟ್ಕಾ ವಶ..!
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ.
ಮುಂಬೈ: ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧಾರಿಸಿ ಈ ಕಾರ್ಯಾಚರಣೆ ನಡೆಸಿದ್ದು ಪಾಲ್ಘರ್ ಜಿಲ್ಲೆಯ ಕಾಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ನಿಷೇದಿತ ಗುಟ್ಕಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳು ಹಾಗೂ ನಾಲ್ಕು ಟ್ರಕ್ ಗಳನ್ನು ಬಾಂದ್ರಾ ಕ್ರೈಮ್ ಬ್ರಾಂಚ್ ಪೊಲೀಸ್ ಅಧಿಕಾರಿ ದಯಾ ನಾಯಕ್ ಮತ್ತು ಅವರ ತಂಡ ವಶಪಡಿಸಿಕೊಂಡಿದ್ದಾರೆ.
ಸಂಜಯ್ ಶ್ಯಾಮ್ ಖಾರತ್, ಜಮೀರ್ ಮನ್ನನ್ ಸೈಯದ್, ನಸೀರ್ ಮೊಹಮ್ಮದ್ ಅಲಿ ಯಲ್ಗಾರ್, ಹಿರಾಲಾಲ್ ವಾಸು ಮಂಡಲ್ ಬಂಧಿತ ಆರೋಪಿಗಳಾಗಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಒಟ್ಟು 10,73,44,000 ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
You must be logged in to post a comment Login