Connect with us

BANTWAL

ಬಂಟ್ವಾಳ ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆಗೈದ ಅಣ್ಣ ಆರೆಸ್ಟ್

ಬಂಟ್ವಾಳ: ಅನೈತಿಕ ಸಂಬಂಧ ಶಂಕೆಯಲ್ಲಿ ತಮ್ಮನನ್ನು ಕೊಲೆ ಮಾಡಿದ ಆರೋಪಿ ಅಣ್ಣನನ್ನು ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಎಂದು ಗುರುತಿಸಲಾಗಿದೆ.


ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂಬಾತನನ್ನು ಶುಕ್ರವಾರ ತಡರಾತ್ರಿ ಕೊಲೆ ಮಾಡಿ ಅರೋಪಿ ರವಿ ಪರಾರಿಯಾಗಿದ್ದ. ಇದೀಗ ಬಂಟ್ವಾಳ ಪೋಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೊಲೆಯಾದ ಸುಂದರ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ‌ ನೀಡುತ್ತಿದ್ದರು. ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ‌ ಸಂಬಂಧವಿದೆ ಎಂದು ಆರೋಪಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು.ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತೋರ್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *