BELTHANGADI
ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಪ್ರಕರಣ ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ ಫೆಬ್ರವರಿ 26: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕನ್ಯಾಡಿಯ ದಿನೇಶ್ ಮೇಲೆ ಆರೋಪಿ ಕೃಷ್ಣ ಹಲ್ಲೆ ನಡೆಸಿದ್ದ. ನಂತರ ಹಲ್ಲೆಗೊಳಗಾದ ದಿನೇಶ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ, ಈ ಹಿನ್ನಲೆ ತನ್ನ ಪುತ್ರನಿಗೆ ಹಲ್ಲೆ ನಡೆಸಿದ್ದಾರೆ ಎಂದು ಮೃತರ ತಾಯಿ ಪದ್ಮಾವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಧರ್ಮಸ್ಥಳ ಪೊಲೀಸರು ಆರೋಪಿ ಕೃಷ್ಣನನ್ನು ವಶಕ್ಕೆ ಪಡೆದಿದ್ದಾರೆ.
You must be logged in to post a comment Login